Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಾಹುಲ್ ಗಾಂಧಿಗೆ ಸಂಕಷ್ಟ : ಆ ಒಂದು ಹೇಳಿಕೆಯಿಂದ ಮತ್ತೊಂದು ಕೇಸ್ ದಾಖಲು..!

---Advertisement---

ನವದೆಹಲಿ: ಮೋದಿ ಸಮುದಾಯದ ಬಗ್ಗೆ ಮಾತನಾಡಿದ್ದ ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಆದರೆ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ. ಆರ್ ಎಸ್ ಎಸ್ ನ ನಾಯಕರೊಬ್ಬರು ರಾಹುಲ್ ಗಾಂಧಿ ವಿರುದ್ಧ ಸಿಡಿದೆದ್ದಿದ್ದು, ದೂರು ನೀಡಿದ್ದಾರೆ.

ರಾಹುಲ್ ಗಾಂಧಿ ಪಕ್ಷ ಸಂಘಟನೆಗಾಗಿ ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ಭಾರತ್ ಜೋಡೋ ಯಾತ್ರೆ ನಡೆಸಿದ್ದಾರೆ. ಈ ಯಾತ್ರೆಯಲ್ಲಿ ನೀಡಿದ್ದ ಒಂದು ಹೇಳಿಕೆಯಿಂದ ಈಗ ದೂರು ದಾಖಲಾಗಿದೆ. ಕಳೆದ ಕನವರಿ 9ರಂದು ಹರಿಯಾಣದ ಅಂಬಾಲದಲ್ಲಿ ಈ ಹೇಳಿಕೆ ನೀಡಿದ್ದರು. “21ನೇ ಶತಮಾನದ ಕೌರವರು ಖಾಕಿ ಚೆ್ಡಿ ಧರಿಸಿರುತ್ತಾರೆ, ಕೈಯಲ್ಲಿ ಲಾಠಿ ಹಿಡಿದಿರುತ್ತಾರೆ, ಶಾಖೆ ಮಾಡುತ್ತಾರೆ” ಅಂತ ಹೇಳಿದ್ದರು.

RSS ನಾಯಕ ಕಮಲ್ ಬಹದೂರಿಯವರು ಇದೀಗ ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ್ದಾರೆ. ಹರಿದ್ವಾರದ ಕೋರ್ಟ್ ನಲ್ಲಿ ದೂರು ದಾಖಲಿಸಿದ್ದಾರೆ. ಇದೇ ತಿಂಗಳ 12ರಂದು ಇದರ ವಿಚಾತಣೆ ನಡೆಯಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರವಿದೆ. ಲೋಕಸಭಾ ಚುನಾವಣೆಯೂ ಬಹಳ ದೂರವೇನು ಇಲ್ಲ. ಆದರೆ ರಾಹುಲ್ ಗಾಂಧಿಗೆ ಚುನಾವಣಾ ಪ್ರಚಾರಕ್ಕಿಂತ ಕೋರ್ಟ್ ಮೆಟ್ಟಿಲೇರುವುದೇ ಜಾಸ್ತಿಯಾಗುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...