Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಟೀಂ ಇಂಡಿಯಾ ಆಟಗಾರ ದುರಾನಿ ನಿಧನ..!

Facebook
Twitter
Telegram
WhatsApp

ಟೀಂ ಇಂಡಿಯಾ ಮಾಜಿ ಆಟಗಾರ ಹಾಗೂ ಆಲ್ ರೌಂಡರ್ ಸಲೀಂ ದುರಾನಿ ನಿಧನರಾಗಿದ್ದಾರೆ. 88 ವರ್ಷದ ಧುರಾನಿಗೆ ಬಹಳ ದಿನಗಳಿಂದ ಅನಾರೋಗ್ಯ ಕಾಡುತ್ತಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ದುರಾನಿ ಅವರು ಗುಜರಾತ್ ನ ಜಾಮ್ನಾ ನಗರದಲ್ಲಿ ವಾಸವಾಗಿದ್ದರು. ಒಮ್ಮೆ ಕಾಲು ಜಾರಿ ಕೆಳಗೆ ಬಿದ್ದು ಮೊಣಕಾಲು ಮುರಿದುಕೊಂಡಿದ್ದರು. ಅಂದಿನಿಂದ ಅವರನ್ನು ಅನಾರೋಗ್ಯ ಕಾಡುತ್ತಿತ್ತು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ‌ ಕೂಡ ಪಡೆಯುತ್ತಿದ್ದರು. ಇದೀಗ ಇಹಲೋಕ ತ್ಯಜಿಸಿದ್ದಾರೆ.

ದುರಾನಿ ಅವರು ಮೂಲತಃ ಆಫ್ಘಾನ್ ನಲ್ಲಿ ಜನಿಸಿದವರು. ಆದರೆ ಭಾರತದಲ್ಲಿ ನೆಲೆಸಿ, ಕ್ರಿಕೆಟ್ ಗೆ ಕೂಡ ಸೇರಪಡೆಯಾಗಿದ್ದರು. ಲೆಫ್ಟ್ ಹ್ಯಾಂಡ್ ಬೌಲರ್ ಮತ್ತು ಬ್ಯಾಟ್ಸ್ಮನ್ ಆಗಿದ್ದವರು ದುರಾನಿ. 1960 ರಿಂದ 1973 ರ ತನಕ ಭಾರತ ತಂಡದಲ್ಲಿ ಅಮೋಘವಾದ ಪ್ರದರ್ಶನ ನೀಡಿದ್ದರು. ಸರಳವಾಗಿಯೆ ಸಿಕ್ಸರ್ ಬಾರಿಸುತ್ತಿದ್ದವರು. 1973ರಲ್ಲಿ ಕೊನೆಯ ಟೆಸ್ಟ್ ಮ್ಯಾಚ್ ಆಡಿದ್ದರು. ಇವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.

ಹೈದ್ರಾಬಾದ್ ನಲ್ಲಿ ನಡೆಯುತ್ತಿರುವ ರಾಜಸ್ಥಾನ್ ರಾಯಲ್ಸ್ ಮತ್ತು ಸನ್ ರೈಸರ್ಸ್ ಹೈದ್ರಾಬಾದ್ ನಡುವಿನ ಐಪಿಎಲ್ ಪಂದ್ಯದ ಆರಂಭಕ್ಕೂ ಮುನ್ನ ಎರಡು ತಂಡಗಳು ದುರಾನಿ ಅವರಿಗೆ ಸಂತಾಪ ಸೂಚಿಸಿದ್ದಾರೆ. ಒಂದು ನಿಮಿಷ ಮೌನಾಚರಣೆ ಆಚರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!