Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕಡೆಗೂ ರಿಲೀಸ್ ಆಗಿದೆ ಕಾಂಗ್ರೆಸ್ 2ನೇ ಪಟ್ಟಿ : ಟಿಕೆಟ್ ಕೊಡಿಸುವಲ್ಲಿ ಸಿದ್ದರಾಮಯ್ಯ ಸಕ್ಸಸ್.. ಡಿಕೆಶಿ ಫೇಲ್ ಆದ್ರಾ..? ಆದ್ರೆ ಡಿಕೆಶಿ ಆಪ್ತರಿಗೆ ಸಿಕ್ಕಿಲ್ಲ ಟಿಕೆಟ್..!

---Advertisement---

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಎಲ್ಲಾ ತಯಾರಿ ನಡೆದಿದೆ. ಪಕ್ಷಗಳು ಸಹ ತಮ್ಮ ತಮ್ಮ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುತ್ತಿವೆ. ಇದೀಗ ಇಂದು ಕಾಂಗ್ರೆಸ್ ಕ್ಷ ಎರಡನೇ ಪಟ್ಟಿ ರಿಲೀಸ್ ಆಗಿದ್ದು, ಇಲ್ಲಿಯೂ ಸಿದ್ದರಾಮಯ್ಯ ವರ್ಸಸ್ ಡಿಕೆಶಿ ಎಂಬಂತೆ ಆಗಿದೆ. ಸಿದ್ದರಾಮಯ್ಯ ಯಾರಿಗೆಲ್ಲಾ ಟಿಕೆಟ್ ಕೊಡಿಸಬೇಕು ಎಂದು ಹಠ ಮಾಡಿದರೋ ಅವರಿಗೆಲ್ಲಾ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತೀರ್ಥಹಳ್ಳಿಯಲ್ಲಿ ಮಂಜುನಾಥ್ ಗೌಡಗೆ ಟಿಕೆಟ್ ಕೊಡಿಸಬೇಕೆಂದು ಡಿಕೆಶಿ ಸಾಕಷ್ಟು ಪಟ್ಟು ಹಿಡಿದಿದ್ದರು. ಆದರೆ ಮಂಜುನಾಥ್ ಗೆ ಟಿಕೆಟ್ ಸಿಕ್ಕಿಲ್ಲ. ಕಲಘಟಗಿಯಲ್ಲಿ ನಾಗಾರಾಜ್ ಚಬ್ಬಿಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡಿದರು ಅಲ್ಲಿಯೂ ಡಿಕೆಶಿ ಅವರ ಪ್ಲ್ಯಾನ್ ಸಕ್ಸಸ್ ಆಗಲೇ ಇಲ್ಲ.

ಆದರೆ ಸಿದ್ದರಾಮಯ್ಯ ಅವರು ತಮ್ಮ ಆಪ್ತರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತೀರ್ಥಹಳ್ಳಿಯಲ್ಲಿ ಕಿಮ್ಮನೆ ರತ್ನಾಕರ್ ಹಾಗೂ ಸಂತೋಷ್ ಲಾಡ್ ಗೆ ಟಿಕೆಟ್ ನೀಡಿದ್ದಾರೆ. ಆದರೆ ಇದರ ನಡುವೆ ಗಂಡಸಿ ನಾಗಾರಾಜ್ ಗೆ ಟಿಕೆಟ್ ಕೊಡಿಸುವಲ್ಲಿ ಡಿಕೆ ಶಿವಕುಮಾರ್ ಯಶಸ್ವಿಯಾಗಿದ್ದಾರೆ.

ಇನ್ನು ಚಿತ್ರದುರ್ಗದಲ್ಲಿ ರಘು ಆಚಾರ್ ಗೆ ಟಿಕೆಟ್ ಕೈ ತಪ್ಪಿದ್ದು, ದೊಡ್ಡಣ್ಣ ಅವರ ಅಳಿಯ ವಿರೇಂದ್ರ ಪಪ್ಪಿಗೆ ಟಿಕೆಟ್ ಸಿಕ್ಕಿದೆ. ಕಾಂಗ್ರೆಸ್ ನಲ್ಲಿ ವಲಸಿಗರಿಗೇನೆ ಹೆಚ್ಚಿನ ಟಿಕೆಟ್ ನೀಡಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment