Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

1ರಿಂದ 5 ನೇ ತರಗತಿ ಪುನರ್ ಆರಂಭದ ವಿಚಾರವಾಗಿ ತಾಂತ್ರಿಕ ಸಮಿತಿ ಸಭೆ: ಬಿ ಸಿ ನಾಗೇಶ್

Facebook
Twitter
Telegram
WhatsApp

ಬೆಂಗಳೂರು: 1 ರಿಂದ 5 ನೇ ತರಗತಿ ಪ್ರಾರಂಭಿಸುವ ವಿಚಾರವಾಗಿ, ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ನಡೆಸುತ್ತೇನೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದರು. ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅ. 21 ರಿಂದ ಬಿಸಿಯೂಟ ಪ್ರಾರಂಭ ಮಾಡ್ತೀವಿ. ಹೀಗಾಗಿ ಶಾಲೆ ಪ್ರಾರಂಭಿಸಲು ನಮಗೆ ಧೈರ್ಯ ಬಂದಿದೆ. ಮುಖ್ಯಮಂತ್ರಿ ಜೊತೆ ತಾಂತ್ರಿಕ ಸಲಹಾ ಸಮಿತಿ ಸಭೆ ಇದೆ. ಸಭೆಯಲ್ಲಿ ಶಾಲೆ ಪ್ರಾರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ.

ನಾವು ಶಾಲೆ ಪ್ರಾರಂಭಿಸಲು ತಯಾರಿ ಪೂರ್ಣಗೊಳಿಸಿದ್ದೇವೆ. ಸಿಎಂ ನಿರ್ಧಾರಕ್ಕೆ ‌ಕಾಯುತ್ತಿದ್ದೇವೆ ಎಂದರು. ಇನ್ನೂ ಶಾಲಾ ಶುಲ್ಕದ ವಿಚಾರವಾಗಿ, ಶುಲ್ಕ ನಿಯಂತ್ರಣ ಸಮಿತಿ ಮಾಡುವಂತೆ ಪೋಷಕರು ಮನವಿ ಮಾಡಿದ್ದಾರೆ. ತೆಲಂಗಾಣ ಹಾಗೂ ಬೇರೆ ರಾಜ್ಯಗಳಲ್ಲಿ ಶುಲ್ಕ ‌ನಿಯಂತ್ರಣ ಸಮಿತಿ ಇದೆ. ಅದನ್ನ ನಮ್ಮ ರಾಜ್ಯದಲ್ಲೂ ತರುವಂತೆ ಪೋಷಕರು ಒತ್ತಡ ಹಾಕುತ್ತಿದ್ದಾರೆ.

ಈ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಅಲ್ಲದೆ ಬೇರೆ ರಾಜ್ಯಗಳಲ್ಲಿ ಯಾವ ಮಾದರಿಯಲ್ಲಿ ಶುಲ್ಕ ಇದೆ ಅನ್ನೋ ಮಾಹಿತಿ ತೆಗೆದುಕೊಳ್ಳಲು ಹೇಳಿದ್ದೇನೆ. ವರದಿ ನೋಡಿ ನಮ್ಮ ರಾಜ್ಯದಲ್ಲೂ ಶುಲ್ಕ ನಿಯಂತ್ರಣ ಸಮಿತಿ ರಚನೆ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ನಾಗೇಶ್ ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

ಚಿತ್ರದುರ್ಗ ಜಿಲ್ಲೆಯ ರೈತರಿಗೆ ಉಪಯುಕ್ತ ಮಾಹಿತಿ | ಬೆಳೆ ಪರಿಹಾರ ಪಾವತಿ ಸಂಬಂಧ ಸಹಾಯವಾಣಿ ಆರಂಭ : ಇಲ್ಲಿದೆ ತಾಲ್ಲೂಕುವಾರು ಮಾಹಿತಿ

ಚಿತ್ರದುರ್ಗ. ಮೇ.08:   ಬೆಳೆ ಪರಿಹಾರ ಪಾವತಿ ಸಂಬಂಧ ಮಾಹಿತಿ ಪಡೆದುಕೊಳ್ಳಲು ರೈತರಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ  ಹಾಗೂ ಜಿಲ್ಲೆಯ 6 ತಾಲ್ಲೂಕು ಕಚೇರಿಗಳಲ್ಲಿ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

error: Content is protected !!