Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಮಾಶ್ರೀಗೆ ತೇರದಾಳ ಟಿಕೆಟ್ ನೀಡದಂತೆ ಸ್ವಾಮೀಜಿಗಳ ಒತ್ತಾಯ : ಕಾರಣ ಏನು ಗೊತ್ತಾ..?

Facebook
Twitter
Telegram
WhatsApp

ಬಾಗಲಕೋಟೆ: 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಈಗಾಗಲೇ ಎರಡನೇ ಪಟ್ಟಿಯನ್ನು ರಿಲೀಸ್ ಮಾಡಿದೆ. ಈ ಬಾರಿ ಗೆಲ್ಲಲೇಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್ ಅಳೆದು, ತೂಗಿ, ಅಭ್ಯರ್ಥಿಗಳ ಬಲಾ, ಬಲಾಢ್ಯತೆಯನ್ನು ಗಮನಿಸಿ ಟಿಕೆಟ್ ಕೊಟ್ಟಿದೆ. ಆದರೆ ಟಿಕೆಟ್ ಆಕಾಂಕ್ಷಿಯಾಗಿದ್ದ ಹಲವರಿಗೆ ಟಿಕೆಟ್ ಸಿಕ್ಕಿಲ್ಲ. ಟಿಕೆಟ್ ಸಿಗದವರು ಈಗಾಗಲೇ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ. ಅದರಲ್ಲಿ ನಟಿ ಉಮಾಶ್ರೀ ಕೂಡ ಒಬ್ಬರು. ಈ ಬಾರಿ ತೇರದಾಳ ಕ್ಷೇತ್ರಕ್ಕೆ ಉಮಾಶ್ರೀ ಅವರ ಹೆಸರು ರಿಜಿಸ್ಟರ್ ಆಗಿಲ್ಲ. ಹೀಗಾಗಿ ಉಮಾಶ್ರೀ ಕೂಡ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ.

ಆದರೆ ತೇರದಾಳ ಕ್ಷೇತ್ರಕ್ಕೆ ಯಾವುದೇ ಕಾರಣಕ್ಕೂ ಟಿಕೆಟ್ ನೀಡಬಾರದು ಎಂದು ಪಟ್ಟು ಹಿಡಿದಿದ್ದಾರೆ. ಅಷ್ಟಕ್ಕೂ ಸ್ವಾಮೀಜಿಗಳು ಆ ರೀತಿ ಪಟ್ಟು ಹಿಡಿಯಲು ಕಾರಣವಾದರೂ ಏನು..? ಅಭಿನವ ರೇವಣ್ಣ ಸಿದ್ದೇಶ್ವರ ಶ್ರೀ, ಮೃತ್ಯುಂಜಯ ಶ್ರೀ, ಪಂಎಇತ್ ಪಟ್ಟಣ್ ಶ್ರೀ, ಮಲ್ಲಪ್ಪ ಬಾವಿಕಟ್ಟೆ ಹಾಗೂ ಚಂದ್ರಶೇಖರ ಶಿವಪೂಜಿ ಶ್ರೀಗಳು ಈ ರೀತಿ ಒತ್ತಾಯ ಮಾಡುತ್ತಿದ್ದಾರೆ.

ಸ್ವಾಮೀಜಿಗಳೆಲ್ಲಾ ಈ ಬಾರಿಯ ವಿಧಾನಸಭಾ ಚುನಾವಣೆಗೆ ಡಾ ಮಲ್ಲೇಶಪ್ಪ ಎಸ್ ದಡ್ಡೇನವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಟಿ ನಡೆಸಿ, ತೇರದಾಳದಲ್ಲಿ 60 ಸಾವಿರ ಹಟಗಾರ ಲಿಂಗಾಯತರಿದ್ದಾರೆ. ಬಹಳ ವರ್ಷದಿಂದಾನೂ ಕಾಂಗ್ರೆಸ್ ಜೊತೆಗೆ ಇದೆ. ಉಮಾಶ್ರೀ ಅವರಿಗೆ ಟಿಕೆಟ್ ನೀಡಿದರೆ ನಮಗೆ ಅಭ್ಯಂತರವೇನು ಇಲ್ಲ. ಆದರೆ ಅವರು ಗೆದ್ದು ಈಗಾಗಲೇ ಸಚಿವೆಯಾಗಿದ್ದಾರೆ. ಯುವಕರಿಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

error: Content is protected !!