Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೇಶಭಕ್ತರ ಸರ್ಕಾರ ಬೆಂಗಳೂರು ನಗರ ಉಸ್ತುವಾರಿ ಸ್ಥಾನಕ್ಕಾಗಿ ಕಿತ್ತಾಟ: ಸಿದ್ದರಾಮಯ್ಯ

Facebook
Twitter
Telegram
WhatsApp

ದೇಶಭಕ್ತರ ಸರ್ಕಾರ ಬೆಂಗಳೂರು ನಗರ ಉಸ್ತುವಾರಿ ಸ್ಥಾನಕ್ಕಾಗಿ ಕಿತ್ತಾಟ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಈ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಂಗಳೂರು ಉಸ್ತುವಾರಿ ಲಾಭದಾಯಕ ಸ್ಥಾನವಾಗಿರುವುದರಿಂದ ಇಷ್ಟೆಲ್ಲಾ ಗಲಾಟೆಗಳಾಗುತ್ತಿದೆ ಎಂದರು.

ಜಿ.ಎಸ್.ಟಿ ಪರಿಹಾರ, ನಮ್ಮ ತೆರಿಗೆ ಪಾಲಿನ ಹಣವನ್ನು ರಾಜ್ಯ ಸರ್ಕಾರ ಗಟ್ಟಿಧ್ವನಿಯಲ್ಲಿ ಕೇಳಬೇಕು. ಇದೇನು ಭಿಕ್ಷೆಯಲ್ಲ, ನಮ್ಮ ಹಕ್ಕು.
ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಆಗುತ್ತಿದೆ. ಏಪ್ರಿಲ್ ಇಂದ ಸೆಪ್ಟೆಂಬರ್ ವರೆಗೆ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ 3,000 ಕೋಟಿ ರೂಪಾಯಿ ತೆರಿಗೆ ಹೆಚ್ಚು ಸಂಗ್ರಹವಾಗಿದೆ. ಸ್ಟಾಲಿನ್ ಸರ್ಕಾರ ಮೂರು ರೂಪಾಯಿ ತೆರಿಗೆ ಕಡಿಮೆ ಮಾಡಿದೆ, ನಮ್ಮ ರಾಜ್ಯದಲ್ಲಿ ಕನಿಷ್ಟ ಹತ್ತು ರೂಪಾಯಿ ಕಡಿಮೆ ಮಾಡಬೇಕು. ಆಗ ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗುತ್ತದೆ.

ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿಮೆ ಮಾಡಬೇಕು. ಕಳೆದ ಏಳು ವರ್ಷದಲ್ಲಿ ಪೆಟ್ರೋಲ್ ಡೀಸೆಲ್ ಮೇಲಿನ ಅಬಕಾರಿ ಸುಂಕ ಒಂದರಿಂದಲೇ ಕೇಂದ್ರ ಸರ್ಕಾರಕ್ಕೆ 23 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ.

ಕರ್ನಾಟಕವೊಂದರಿಂದಲೇ 1.20 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ. ಬಡವರ ಬಗ್ಗೆ ದೊಡ್ಡ ದೊಡ್ಡ ಮಾತನಾಡುವ ಬಿಜೆಪಿಯವರು ತೆರಿಗೆ ಕಡಿತ ಮಾಡಿ ಜನರಿಗೆ ಸಹಾಯ ಮಾಡಲಿ ಎಂದರು‌.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….   ಬುಧವಾರ ರಾಶಿ ಭವಿಷ್ಯ -ಮೇ-8,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರಮಾಸ,

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

error: Content is protected !!