Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಧಾನಿ ಮೋದಿಯವರ ನಿರ್ಧಾರದಂತೆ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆದ್ರೆ ಬಿವೈ ವಿಜಯೇಂದ್ರ ಅವರಿಗೆ ಟಿಕೆಟ್ ಮಿಸ್ ಆಗುತ್ತಾ..?

Facebook
Twitter
Telegram
WhatsApp

 

ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಎರಡು ಪಕ್ಷಗಳು ಚುನಾವಣೆಯ ಅಖಾಡಕ್ಕೆ ತಮ್ಮ ಅಭ್ಯರ್ಥಿಗಳ ಹೆಸರನ್ನು ಸೂಚಿಸಿದ್ದಾರೆ. ಆದರೆ ಬಿಜೆಪಿ ಮಾತ್ರ ಸಿಕ್ಕಾಪಟ್ಟೆ ಯೋಚನೆ ಮಾಡ್ತಾ ಇದೆ. ಮತ್ತೆ ಮತ್ತೆ ಸರ್ವೆ ಮಾಡುತ್ತಾ ಇದೆ. ನಿನ್ನೆಯೇ ಮೊದಲ ಪಟ್ಟಿ ರಿಲೀಸ್ ಮಾಡುವ ತಯಾರಿ ನಡೆಸಿತ್ತು. ಆದರೂ ಇನ್ನು ಎರಡು ದಿನಕ್ಕೆ ಮುಂದೋಗಿದೆ.

 

ಇದೆಲ್ಲಕ್ಕೂ ಕಾರಣ ಪ್ರಧಾನಿ ಮೋದಿಯವರ ನಿರ್ಧಾರವಂತೆ ಎನ್ನಲಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಒಂದಷ್ಟು ಸ್ಟಾಟರ್ಜಿ ಮಾಡಲು ಪ್ರಧಾನಿಯವರು ನಿರ್ಧರಿಸಿದ್ದಾರೆ. ಇದು ಟಿಕೆಟ್ ವಿಚಾರಕ್ಕೂ ಅನ್ವಯವಾಗಲಿದೆ. ಗುಜರಾತ್ ಮಾದರಿಯನ್ನು ಅನುಸರಿಸುವ ವಿಚಾರವೂ ಸೇರಿರಬಹುದು. ಹಾಲಿ ಶಾಸಕರು ಹಾಗೂ ಸಂಸದರ ಮಕ್ಕಳಿಗೆ ಮಣೆ ಹಾಕದೆ, ಹೊಸ ಮುಖಗಳನ್ನು ಪರಿಚಯ ಮಾಡಿಕೊಡುವ ಯೋಜನೆ ನಡೆದಿದೆ ಎನ್ನಲಾಗಿದೆ.

ಇನ್ನು ಕೆಲ ಮೂಲಗಳಿಂದ ಬಂದ ಮಾಹಿತಿ ಪ್ರಕಾರ, ಪ್ರಧಾನಿ‌ ಮೋದಿಯವರ ಈ ನಿರ್ಧಾರದಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬೇಸರಗೊಂಡಿದ್ದಾರೆ ಎನ್ನಲಾಗಿದೆ. ಯಾಕಂದ್ರೆ ತಾನೂ ಸಿಎಂ ಸ್ಥಾನ ಬಿಟ್ಟುಕೊಟ್ಟಿದ್ದು, ತ್ಯಾಗ ಮಾಡಿದ್ದೆಲ್ಲ ತನ್ನ ಮಕ್ಕಳ ಭವಿಷ್ಯಕ್ಕಾಗಿ. ಈಗ ಪಕ್ಷದಿಂದ ಮಕ್ಕಳಿಗೆ ಟಿಕೆಟ್ ಸಿಗದೆ ಹೋದರೆ ಎಂಬ ಬೇಸರ ಅವರಲ್ಲಿದೆ. ಒಂದು ವೇಳೆ ಪ್ರಧಾನಿ ಮೋದಿಯವರ ನಿರ್ಧಾರದಂತೆ ಟಿಕೆಟ್ ಘೋಷಣೆಯಾದರೆ, ಬಿವೈ ವಿಜಯೇಂದ್ರ ಅವರಿಗೆ ಟಿಕೆಟ್ ಮಿಸ್ಸಾಗುವ ಸಾಧ್ಯತೆ ಇರುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!