Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಮನಗರದಲ್ಲಿ `ಸ್ಕಿಲ್ ಹಬ್’ ಸ್ಥಾಪನೆ : ಅಶ್ವತ್ಥನಾರಾಯಣ

Facebook
Twitter
Telegram
WhatsApp

ಬೆಂಗಳೂರು: ಉದ್ಯಮರಂಗವು ಎದುರಿಸುತ್ತಿರುವ ಸಮಸ್ಯೆಗಳಿಗೆಲ್ಲ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪರಿಹಾರವಿದ್ದು, ಇದರ ಅನುಷ್ಠಾನದಲ್ಲಿ ಕರ್ನಾಟಕವು ಮೊದಲ ಸ್ಥಾನದಲ್ಲಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ಈ ವೇಳೆ ಎರಡು ದಿನಗಳ `ಉದ್ಯಮಿಯಾಗು, ಉದ್ಯೋಗ ನೀಡು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಯುವಜನರು ಲಭ್ಯ ಉದ್ಯೋಗಾವಕಾಶಗಳ ಬಗ್ಗೆ ತಿಳಿದುಕೊಳ್ಳಲು ಮತ್ತು ಅವರಿಗೆ ಅಗತ್ಯ ತರಬೇತಿ ನೀಡಲು ರಾಮನಗರದಲ್ಲಿ `ಸ್ಕಿಲ್ ಹಬ್’ ಸ್ಥಾಪಿಸಲಾಗುವುದು ಎಂದು ಹೇಳಿದರು.

ದೇಶದಲ್ಲಿ ಉದ್ಯಮಶೀಲತೆಯನ್ನು ಸಂಭ್ರಮಿಸಬೇಕು ಮತ್ತು ಅದಕ್ಕೆ ಅಗತ್ಯವಾದ ಎಲ್ಲ ಬೆಂಬಲವನ್ನೂ ನೀಡಬೇಕು. ಪ್ರಧಾನಿ ಮೋದಿಯವರು ದೇಶದ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ಎನ್ಇಪಿ ಜಾರಿಗೆ ತೀರ್ಮಾನಿಸಿದ್ದಾರೆ. ಈ ನೀತಿಯ ಮೂಲಕ ದೇಶದಲ್ಲಿ ದಕ್ಷವಾದ ಉದ್ಯಮ ಸಂಸ್ಕೃತಿಯನ್ನು ಬೆಳೆಸಲಾಗುವುದು. ಇದಕ್ಕೆ ಪೂರಕವಾಗಿ ನಮ್ಮ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕೂಡ ಹೆಸರಾಂತ ಕಂಪನಿಗಳೊಂದಿಗೆ ಒಡಂಬಡಿಕೆಗಳನ್ನು ಮಾಡಿಕೊಂಡು, ಮುಂದಡಿ ಇಡಲಾಗುವುದು ಎಂದು ಸಚಿವರು ಪ್ರತಿಪಾದಿಸಿದರು.

ನೂತನ ಶಿಕ್ಷಣ ನೀತಿಯಲ್ಲಿ ಅನುಭವಾತ್ಮಕ ಕಲಿಕೆ, ಪ್ರಾಜೆಕ್ಟ್ ಆಧಾರಿತ ಕಲಿಕೆ, ಸೇವೆಯ ಮೂಲಕ ಕಲಿಕೆ ಮತ್ತು ವೃತ್ತಿ ತರಬೇತಿಗಳಿರುವ ಸರ್ವಾಂಗೀಣ ಕಲಿಕೆಗೆ ಒತ್ತು ನೀಡಲಾಗಿದೆ. ಶಾಲೆಗೆ ಕಲಿಯಲು ಬರುವ ಮಗುವು ಪ್ರಾಥಮಿಕ ಶಿಕ್ಷಣದ ಹಂತದಲ್ಲೇ ಹಲವು ವೃತ್ತಿಗಳಿಗೆ ತನ್ನನ್ನು ತೆರೆದುಕೊಳ್ಳುವಂತೆ ಮಾಡುವ ಸದಾಶಯವನ್ನು ಇದು ಹೊಂದಿದೆ. ಅಂತಿಮವಾಗಿ ಈ ನೀತಿಯು 21ನೇ ಶತಮಾನದ ಅಗತ್ಯಗಳನ್ನು ಪೂರೈಸಲಿದೆ ಎಂದು ಹೇಳಿದರು.

ಕೈಗಾರಿಕಾ ರಂಗಕ್ಕೆ ಅಗತ್ಯ ಪ್ರೋತ್ಸಾಹ ಮತ್ತು ಸೌಲಭ್ಯಗಳನ್ನು ನೀಡುವಲ್ಲಿ ಕರ್ನಾಟಕವು ದೇಶದಲ್ಲಿ ಎಂದಿಗೂ ಮುಂಚೂಣಿಯಲ್ಲಿದೆ. ಗ್ರಾಮೀಣ ಭಾಗಗಳಲ್ಲಿ ಉದ್ದಿಮೆಗಳು ನೆಲೆಯೂರುವಂತೆ ಮಾಡಲು ಇನ್ನು ಮುಂದೆಯೂ ಸರಕಾರವು ಈ ಕ್ಷೇತ್ರಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅವರು ಭರವಸೆ ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಂದು ಟೀಂ ಇಂಡಿಯಾದ ಉಪನಾಯಕನಾಗಿದ್ದ ಕೆ ಎಲ್ ರಾಹುಲ್ ಈ ಬಾರಿ ತಂಡದಿಂದಾನೇ ಔಟ್..!

ಟ20 ವೇಳೆ ಶ್ವಕಪ್ ಟೂರ್ನಿಗೆ ಆಟಗಾರರನ್ನು ಆಯ್ಕೆ ಮಾಡಲಾಗಿದ್ದಿ, ಕನ್ನಡಿಗ ಕೆ ಎಲ್ ರಾಹುಲ್ ಗೆ ಸ್ಥಾನವನ್ನೇ ನೀಡಿಲ್ಲ. ತಂಡಿದಿಂದ ಹೊರಗೆ ಉಳಿದಿದ್ದಾರೆ. ಈ ಬಾರಿಯ ಐಪಿಎಲ್ ಮ್ಯಾಚ್ ನೆಲ್ಲಾ ಯಾರೆಲ್ಲಾ ಉತ್ತಮ ಪ್ರದರ್ಶ‌

ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ಹಾಗೂ ರೇವಣ್ಣರಿಗೆ ನೋಟೀಸ್ ನೀಡಿದ ಎಸ್ಐಟಿ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ವಿಡಿಯೋದಲ್ಲಿ ಗುರುತು ಸಿಕ್ಕವರನ್ನು ಕರೆಸಿ , ವಿಚಾರಣೆ ನಡೆಸುತ್ತಿದ್ದಾರೆ. ರಾಜಕೀಯ ನಾಯಕರ ಕೆಸೆರೆಚಾಟದ ನಡುವೆ ತನಿಖೆ ತೀವ್ರಗೊಂಡಿದೆ. ಎಡಿಜಿಪಿ ಬಿಜಯ್

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

error: Content is protected !!