Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮುಸ್ಲಿಂ ಮೀಸಲಾತಿ ರದ್ದಿಗೆ ರಾಜ್ಯ ಸರ್ಕಾರ ಚಿಂತನೆ : ಕಾನೂನು ಬಾಹಿರ ಎಂದ ಸುಪ್ರೀಂ ಕೋರ್ಟ್

---Advertisement---

ನವದೆಹಲಿ: ಕಳೆದ ಕೆಲವು ವರ್ಷಗಳಿಂದ ಮೀಸಲಾತಿಗಾಗಿ ಹಲವು ಸಮುದಾಯಗಳು ಹೋರಾಟ ಮಾಡುತ್ತಿವೆ. ಚುನಾವಣಾ ಹೊತ್ತಲ್ಲೂ ಕೂಡ ಪ್ರತಿಭಟನೆಯ ಕಾವು ಹೆಚ್ಚಾಗಿತ್ತು. ಸಮುದಾಯದವರನ್ನು ಸಮಾಧಾನ ಮಾಡಲು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮೀಸಲಾತಿ ನೀಡುವ ಬಗ್ಗೆ ಭರವಸೆಯನ್ನು ನೀಡಿದ್ದರು. ಜೊತೆಗೆ ಮುಸ್ಲಿಂ ಸಮುದಾಯಕ್ಕಿರುವ ಮೀಸಲಾತಿಯನ್ನು ರದ್ದು ಪಡಿಸುವ ಯೋಜನೆಯ ಬಗ್ಗೆಯೂ ಮಾತನಾಡಿದ್ದರು.

ಮೀಸಲಾತಿ ರದ್ದತಿಗೆ ಸಂಬಂಧಪಟ್ಟಂತೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಾತನಾಡಿದ್ದು, ಶೇಕಡ 4ರಷ್ಟಿರುವ ಮೀಸಲಾತಿಯನ್ನು ರದ್ದು ಪಡಿಸುವುದು ಕಾನೂನು ಬಾಹಿರ ಎಂದು ತಿಳಿಸಿದೆ.ರಾಜ್ಯ ಸರ್ಕಾರದ ಮೀಸಲಾತಿ ರದ್ದತಿಗೆ ಪರಿಷ್ಕರಣೆಯ ಆದೇಶ ಪ್ರಶ್ನಿಸಿ, ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಮೀಸಲಾತಿ ರದ್ದು ವಿಚಾರ ಸಂಪೂರ್ಣವಾಗಿ ಊಹೆಯಿಂದ ಕೂಡಿದೆ. ಒಕ್ಕಲಿಗ, ಲಿಂಗಾಯತ ಮೀಸಲಾತಿ ಕೂಡ ದೋಷಪೂರಿತವಾಗಿದೆ. ಏಪ್ರಿಲ್ 18ರವರೆಗೆ ಮುಸ್ಲಿಂ ಸಮುದಾಯದ ಮೀಸಲಾತಿ ರದ್ದಾಗಬಾರದು ಎಂದು ಸೂಚನೆ ನೀಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...