Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿ ಬಿಟ್ಟಿದ್ದು ಎಷ್ಟು ಮಂದಿ ಅನ್ನೋ ಲೆಕ್ಕ ಇಲ್ಲಿದೆ..!

Facebook
Twitter
Telegram
WhatsApp

 

ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಪಕ್ಷಗಳು 224 ಕ್ಷೇತ್ರಕ್ಕೂ ತಮ್ಮ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ತಯಾರಿ ನಡೆಸಿತ್ತು. ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೇನೋ ದುಪ್ಪಟ್ಟಾಗಿರುತ್ತದೆ. ಆದರೆ ಪಕ್ಷಗಳು ಮಾತ್ರ ಅಳೆದು ತೂಗಿ, ಗೆಲ್ಲುವಂತ ಅಭ್ಯರ್ಥಿಗಳಿಗೆ ಟಿಕೆಟ್ ನೀಡುತ್ತಾರೆ. ಈ ವೇಳೆ ಪಲ್ಷಗಳಿಗೆ ಬಂಡಾಯದ ಬಿಸಿಯೂ ಜೋರಾಗಿಯೆರ ಮುಟ್ಟುತ್ತದೆ. ಅದೆಲ್ಲವನ್ನು ಶಮನ ಮಾಡಿ, ಸಮಾಧಾನಗೊಳಿಸಿ, ಫೈನಲಿ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ ಉದ್ದೇಶವಾವಿರುತ್ತದೆ.

ಈ ಬಾರಿಯ ಚುನಾವಣಾ ರಣಕಣ ಸಿಕ್ಕಾಪಟ್ಟೆ ಕುತೂಹಲ ಮೂಡಿಸಿದೆ. ಅದರಲ್ಲೂ ಬಿಜೆಪಿ. ಗುಜರಾತ್ ನಲ್ಲಿ ಹೊಸ ಮಾದರಿಯನ್ನು ಅಳವಡಿಸಿಕೊಂಡಿದ್ದ ಕಾರಣಕ್ಕೆ ಸುಲಭವಾಗಿ ಗೆಲುವನ್ನು ತನ್ನದಾಗಿಸಿಕೊಂಡಿತ್ತು ಬಿಜೆಪಿ. ಹೀಗಾಗಿ ಕರ್ನಾಟಕದಲ್ಲೂ ಅದೇ ಮಾದರಿಯನ್ನು ಅನುಸರಿಸುತ್ತಿದೆ. ಹಿರಿಯರಿಗೆಲ್ಲಾ ಕೊಕ್ ಕೊಟ್ಟು ಯುವಕರಿಗೆ, ಹೊಸಬರಿಗೆ ಮಣೆ ಹಾಕಿದೆ. ಇದು ಬಂಡಾಯದ ಬೆಂಕಿಯಾಡಲು ಅವಕಾಶ ಮಾಡಿಕೊಟ್ಟಂತಾಗಿದೆ.

ಬಂಡಾಯವೆದ್ದು, ಬೇಸರ ಮಾಡಿಕೊಂಡು ಬಿಜೆಪಿಗೆ ಗುಡ್ ಬೈ ಹೇಳಿದವರ ಲೆಕ್ಕ ಇಲ್ಲಿದೆ ನೋಡಿ.

ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮಾಜಿ ಶಾಸಕ ಬಾಬೂರಾವ್ ಚಿಂಚನಸೂರು, ಮೂಡಿಗೆರೆ ಮಾಜಿ ಶಾಸಕ ಎಂ ಪಿ ಕುಮಾರಸ್ವಾಮಿ, ನೆಹರೂ ಓಲೇಕಾರ್, ಸೊಗಡು ಶಿವಣ್ಣ, ಎನ್ ಆರ್ ಸಂತೋಷ್, ಫೈಟರ್ ರವಿ, ಚಿಕ್ಕನಗೌಡರ್, ಎ ಬಿ ಮಾಲಕರೆಡ್ಡಿ, ಶಶಿಕಾಂತ್ ನಾಯಕ್, ಮಲ್ಲಿಕಾರ್ಜುನ ಖೂಬಾ, ಪುಟ್ಟಣ್ಣ, ಹೆಚ್ ವಿಶ್ವನಾಥ್, ಆರ್ ಶಂಕರ್, ಎನ್ ವೈ ಗೋಪಾಲಕೃಷ್ಣ, ವಿಶ್ವನಾಥ್ ಪಾಟೀಲ್, ದೊಡ್ಡಪ್ಪಗೌಡ ಪಾಟೀಲ್ ನರಿಬೋಳ,ವಮಹದೇವಪ್ಪ ಯಾದವಾಡ, ಮಂಜುನಾಥ್ ಕುನ್ನೂರು, ಗೂಳಿಹಟ್ಟಿ ಶೇಖರ್ ರಾಜೀನಾಮೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..!

ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಕ್ಕೆ ಕರ್ನಾಟಕ ಪರೀಕ್ಷಾ ಮಂಡಳಿ ಡೇಟ್ ಫಿಕ್ಸ್ ಆಗಿದೆ. ನಾಳೆಯೇ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ. 8.69 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಾಳೆಯೇ ತಿಳಿಯಲಿದೆ. ಮೇ 9ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು

ಗಾಳಿ ಮಳೆಗೆ ಕರೆಂಟ್ ಹೋದ್ರೆ ಈ ನಂಬರ್ ಗೆ ವಾಟ್ಸಾಪ್ ಮಾಡಿ

ಬೆಂಗಳೂರು: ಇನ್ನು ಮಳೆಗಾಲ ಶುರುವಾಯ್ತು. ಈ ಮಳೆಗಾಲ ಬಂತು ಅಂದ್ರೆ ಸಾಕು ಎಲ್ಲೆಡೆ ಮರಗಿಡಗಳು ಬೀಳುತ್ತವೆ, ಪವರ್ ಕಟ್ ಸಮಸ್ಯೆಗಳು ಕೂಡ ಕಾಡುತ್ತವೆ. ಈ ವೇಳೆ ಬೆಸ್ಕಾಂನವರು ಜನರ ಕೈಗೆ ಸಿಗುವುದು ಕಷ್ಟವಾಗಿದೆ. ಆದರೆ

ಹಣ ಉಳಿತಾಯಕ್ಕೆ RD ಅಥವಾ FD.. ಯಾವುದು ಬೆಟರ್..?

ಮನುಷ್ಯನ ಈಗಿನ ಜೀವನಶೈಲಿಯಿಂದ ಹಣದ ಅವಶ್ಯಕತೆ ಬಹಳ ಇದೆ. ಬೆಲೆ ಏರಿಕೆಯ ನಡುವೆ ಮುಂದಿನ ಜೀವನಕ್ಕಾಗಿ ಹಣ ಉಳಿಸಲೇಬೇಕಾಗಿದೆ‌. ಆದರೆ ಹಣ ಉಳಿಕೆಗೆ ಅಥವಾ ಇರುವ ಹಣಕ್ಕೆ ಬ್ಯಾಂಕ್ ನಲ್ಲಿ ಯಾವ ಮಾರ್ಗವನ್ನು ಬಳಸಬೇಕೆಂಬುದು

error: Content is protected !!