Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಜಿ ಸಿಎಂ ಯಡಿಯೂರಪ್ಪ ಮಗ 100 ಕೋಟಿಗೂ ಹೆಚ್ಚಿನ ಒಡೆಯ..!

Facebook
Twitter
Telegram
WhatsApp

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ಸದ್ಯ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಮಕ್ಕಳ ರಾಜಕೀಯ ಭವಿಷ್ಯದ ಬಗ್ಗೆಯಷ್ಟೇ ಹೆಚ್ಚಿನ ಗಮನ ನೀಡಿದ್ದಾರೆ. ಹೀಗಾಗಿಯೇ ಈ ಬಾರಿಯ ಚುನಾವಣೆಯಲ್ಲಿ ಶಿಕಾರಿಪುರವನ್ನು ಮಗ ವಿಜಯೇಂದ್ರ ಅವರಿಗೆ ಬಿಟ್ಟು ಕೊಡಲಾಗಿದೆ. ಇದೀಗ ವಿಜಯೇಂದ್ರ ಅವರು ನಾಮಪತ್ರ ಸಲ್ಲಿಕೆ ಮಾಡಿದ್ದು, ಅದರಲ್ಲಿ ತನ್ನಲ್ಲಿರುವ ಆಸ್ತಿಯ ವಿಚಾರವನ್ನು ತಿಳಿಸಿದ್ದಾರೆ.

ವಿಜಯೇಂದ್ರ ಮತ್ತು ಅವರ ಪತ್ನಿ ಪ್ರೇಮಾ ವಿಜಯೇಂದ್ರ  ಒಟ್ಟು 126.18 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ. ಆದರೆ, ದಂಪತಿಗೆ ಒಂದೇ ಒಂದು ಸ್ವಂತ ಕಾರು ಇಲ್ಲ. ವಿಜಯೇಂದ್ರ ಅವರು 46.82 ಕೋಟಿ ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಅವರ ಪತ್ನಿ 7.85 ಮೌಲ್ಯದ ಚರಾಸ್ತಿಯ ಒಡತಿಯಾಗಿದ್ದಾರೆ. ಇನ್ನು ಈ ದಂಪತಿ ಬಳಿ ಪ್ರಸ್ತುತ 70.11 ಕೋಟಿ ರೂ ಮೌಲ್ಯದ ಸ್ಥಿರಾಸ್ತಿ ಇದೆ.

ವಿಜಯೇಂದ್ರ ಒಟ್ಟು 1.75 ಲಕ್ಷ ರೂ. ಮೌಲ್ಯದ ಟ್ರ್ಯಾಕ್ಟರ್ ಮತ್ತು ಟ್ರೇಲರ್ ಹೊಂದಿದ್ದಾರೆ. ದಂಪತಿ ಬಳಿ ಒಟ್ಟು 2.29 ಕೋಟಿ ರೂ. ಮೌಲ್ಯದ ಚಿನ್ನ, ವಜ್ರ, ಬೆಳ್ಳಿ ವಸ್ತುಗಳು ಇವೆ. ವಿಜಯೇಂದ್ರ ಅವರ ಬಳಿ 1.34 ಕೆಜಿ ಚಿನ್ನ ಇದ್ದರೆ, ಅವರ ಪತ್ನಿ 1.25 ಕೆಜಿ ಚಿನ್ನಾಭರಣಗಳನ್ನು ಹೊಂದಿದ್ದಾರೆ.

ಶಿಕಾರಿಪುರದಲ್ಲಿ ಕೃಷಿ ಭೂಮಿ, ದೊಡ್ಡಬಳ್ಳಾಪುರ, ರಾಮನಗರ, ಶಿಕಾರಿಪುರ, ಶಿವಮೊಗ್ಗ, ಕಲಬುರಗಿ ಮತ್ತು ಬೆಂಗಳೂರಿನಲ್ಲಿ ಕೃಷಿಯೇತರ ಭೂಮಿ ಹೊಂದಿದ್ದಾರೆ. ಏಳು ಮನೆಗಳ್ನು ಹೊಂದಿದ್ದಾರೆ. ಇನ್ನು ತಮ್ಮ ವಿರುದ್ಧ ಎರಡು ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ ಎಂದು ಅಫಿಡವಿಟ್​ನಲ್ಲಿ ಘೋಷಿಸಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!