Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರಿಂದ ಶಿವಮೊಗ್ಗಕ್ಕೆ ಸಾಗಿಸುತ್ತಿದ್ದ 40 ಕೆಜಿ ಚಿನ್ನ ಚಿಕ್ಕಮಗಳೂರಿನಲ್ಲಿ ಪೊಲೀಸರ ವಶಕ್ಕೆ..!

---Advertisement---

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಜನ ನಾಯಕರು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ.‌ ನಾಳೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದೆ. ಹೀಗಾಗಿ ಆದಷ್ಟು ಇಂದೇ ಎಲ್ಲರೂ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ಇದರ ನಡುವೆ ಚುನಾವಣೆ ಅನೌನ್ಸ್ ಆಗುತ್ತಿದ್ದಂತೆ. ಪೊಲೀಸರು ಅಲರ್ಟ್ ಆಗಿದ್ದಾರೆ.

ಯಾಕಂದ್ರೆ ಎಲೆಕ್ಷನ್ ನಲ್ಲಿ ಹಣದ ಹೊಳೆ ಹರಿಯುತ್ತದೆ. ಅದನ್ನು ತಪ್ಪಿಸಲು, ದಾಖಲೆಯಿಲ್ಲದ ಹಣ ಸಾಗಾಟವನ್ನು ತಪ್ಪಿಸುವುದು ಸೇರಿದಂತೆ ಎಲ್ಲಾ ರೀತಿಯ ತಪಾಸಣೆ ನಡೆಯಲಿದೆ. ಹೀಗಾಗಿಯೇ ಪೊಲೀಸರು ಎಲ್ಲಾ ಕಡೆ ಚೆಕ್ ಪೋಸ್ಟ್ ಗಳನ್ನು ನಿರ್ಮಾಣ ಮಾಡಿ ತಪಾಸಣೆ ಮಾಡುತ್ತಿದ್ದಾರೆ. ಹೀಗೆ ತಪಾಸಣೆ ಮಾಡುವಾಗ ಚಿಕ್ಕಮಗಳೂರಿನಲ್ಲಿ ಚಿನ್ನದ ಸಾಮ್ರಾಜ್ಯವೇ ತಗಲಾಕಿಕೊಂಡಿದ್ದು.

ತರೀಕೆರಿ ತಾಲೂಕಿನ ಎಂಸಿ ಹಳ್ಳಿಯ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಮಾಡುವಾಗ ಈ ಚಿನ್ನಾಭರಣ ಸಿಕ್ಕಿದೆ. ಕಂಟೈನರ್ ನಲ್ಲಿ ಬರೋಬ್ಬರಿ 40 ಕೆಜಿ ಚಿನ್ನಾಭರಣವನ್ನು ಸಾಗಿಸಲಾಗಿತ್ತು. ಅದು 23 ಕೋಟಿ ಬೆಲೆ ಬಾಳುವ ಚಿನ್ನಾಭರಣ. ಇನ್ನು ಅಷ್ಟೊ ದೊಡ್ಡ ಮೊತ್ತದ ಚಿನ್ನಾಭರಣಕ್ಕೆ ದಾಖಲೆಗಳು ಸಿಕ್ಕಿಲ್ಲ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಅದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...