Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ರೂ.94,77,470 ಮೌಲ್ಯದ ಮದ್ಯ, ರೂ. 84,18,490 ಮೌಲ್ಯದ ಚಿನ್ನಾಭರಣ ಹಾಗೂ ರೂ.64,31,290 ಹಣ ವಶ

Facebook
Twitter
Telegram
WhatsApp

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಏ.22) : ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಯ ವಿವಿಧ ಚಕ್ ಪೊಸ್ಟ್, ಫ್ಲೈಯಿಂಗ್ ಸ್ಕ್ವಾಡ್, ಅಬಕಾರಿ ಹಾಗೂ ಪೊಲೀಸ್ ಇಲಾಖೆಯಿಂದ ಅನಧಿಕೃತವಾಗಿ ಸಾಗಿಸುತ್ತಿದ್ದ ಬಾರಿ ಪ್ರಮಾಣದ ಮದ್ಯ, ಹಣ ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಾರ್ಚ್ 29 ರಿಂದ ಏಪ್ರಿಲ್ 22 ರವರೆಗೆ ರೂ.94,77,470 ಮೌಲ್ಯದ ಮದ್ಯ, ರೂ.84,18,490 ಮೌಲ್ಯದ ಚಿನ್ನಾಭರಣ ಹಾಗೂ ರೂ.64,31,290 ಹಣ ವಶಪಡಿಸಿಕೊಳ್ಳಾಗಿದೆ.

ಫ್ಲೈಯಿಂಗ್ ಸ್ಕ್ವಾಡ್ ತಂಡದಿಂದ ರೂ.50,61,290 ವಶಪಡಿಸಿಕೊಳ್ಳಲಾದ್ದು ಇದರಲ್ಲಿ ಪರಿಶೀಲನೆ ಬಳಿಕ ಸೂಕ್ತ ದಾಖಲೆಯುಳ್ಳ ರೂ.20,17,160 ಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಗಿದೆ. ಸ್ಥಾನಿಕ ತನಿಖಾ ತಂಡಗಳಿಂದ ವಶಪಡಿಸಿಕೊಳ್ಳಲಾದ ರೂ. 13,70,000 ರಲ್ಲಿ ಪರಿಶೀಲನೆ ಬಳಿಕ ರೂ.7,00,000 ವಾರಸುದಾರರಿಗೆ ಹಿಂದುರಿಗಿಸಲಾಗಿದೆ.

ಅಬಕಾರಿ ಇಲಾಖೆಯಿಂದ ರೂ.94,77,470 ಮೌಲ್ಯದ 40,121 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಪೊಲೀಸ್ ಇಲಾಖೆಯಿಂದ ರೂ.84,18,490 ಮೌಲ್ಯದ 2,740 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ಚೆಕ್‌ಪೋಸ್ಟ್‌ಗಳಲ್ಲಿ ನಿರ್ಲಕ್ಷ್ಯವಹಿಸಿದ ಅಧಿಕಾರಿಗಳು ಇನ್ನಷ್ಟೂ ಸರಿಯಾಗಿ ತಪಾಸಣೆ ನಡೆಸುವಂತೆ ನಿರ್ದೇಶನ ನೀಡಲಾಗಿದೆ. ಅಕ್ರಮ ಹಣ, ಮದ್ಯ ಸಾಗಾಟ ಹಾಗೂ ಅವುಗಳ ಹಂಚುವಿಕೆ ತಡೆಗೆ ಸಾಕಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಇದುವರೆಗೂ ಚುನಾವಣೆ ವೆಚ್ಚ ಸಂಬಂಧಿ 2 ಪ್ರಕರಣ, ಅಬಕಾರಿ ನಿಯಮ ಉಲಂಘನೆ ಅಡಿ 62 ಪ್ರಕರಣ ದಾಖಲಿಸಲಾಗಿದೆ.  ಅಕ್ರಮ ಹಣ ಸಾಗಟ, ಹಂಚಿಕೆ ಹಾಗೂ ಲಂಚದ 3 ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

error: Content is protected !!