Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಮ್ಮಿಶ್ರ ಸರ್ಕಾರ ಮುಗಿದ ಅಧ್ಯಾಯ: ಡಿ ಕೆ ಶಿವಕುಮಾರ್

Facebook
Twitter
Telegram
WhatsApp

ಬೆಂಗಳೂರು: ಸರಕಾರ ಕೆಡವಿದ್ದು ಯಾರು ಎಂಬುದರ ಬಗ್ಗೆ ಯಾರು ಮಾತನಾಡಿದ್ದಾರೋ ಅವರನ್ನೇ ಹೋಗಿ ಕೇಳಿ. ಸಮ್ಮಿಶ್ರ ಸರ್ಕಾರ ಪತನ ಮುಗಿದ ಅಧ್ಯಾಯ. ಆ ಬಗ್ಗೆ ಚರ್ಚೆ ಮಾಡಲು ನನಗೆ ಯಾವುದೇ ಆಸಕ್ತಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು. ‌ಈ ವೇಳೆ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರ ಕೆಡವಿದ್ದು ಸಿದ್ದರಾಮಯ್ಯ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು ರಾಜ್ಯದ ಜನರ ಸೇವೆ, ಪಕ್ಷವನ್ನು ಅಧಿಕಾರಕ್ಕೆ ತರುವುದು, ಜನ ನಮಗೆ ಆಶೀರ್ವಾದ ಮಾಡಬೇಕು ಎಂಬುದರ ಮೇಲಷ್ಟೇ ನಾವು ಆಸಕ್ತಿ ವಹಿಸಿದ್ದೇವೆ ಎಂದರು.

ನಿಮ್ಮ ಸಾಮಾಜಿಕ ಜಾಲತಾಣ ನಿರ್ವಹಣೆ ಮಾಡುತ್ತಿರುವ ಏಜೆನ್ಸಿ ಡಿಸೈನ್ ಬಾಕ್ಸ್ ಮೇಲೆ ಐಟಿ ದಾಳಿ ನಡೆದಿದೆಯಲ್ಲಾ ಎಂಬ ಮಾಧ್ಯಮದವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಯಾರು ಹೇಳಿದ್ದು ಅವರು ನನ್ನ ಸಾಮಾಜಿಕ ಜಾಲತಾಣ ನಿರ್ವಹಿಸುತ್ತಿದ್ದಾರೆ ಎಂದು ಮರುಪ್ರಶ್ನಿಸಿದರು.

ಅವರು ನನಗೆ ಸಹಾಯ ಮಾಡುತ್ತಿದ್ದರು. ಅಲ್ಲಿರುವವರು ವೃತ್ತಿಪರರು. ಅವರು ಐಟಿ ಅಧಿಕಾರಿಗಳಿಗೆ ಯಾವ ಉತ್ತರ ಕೊಡಬೇಕೋ ಕೊಡುತ್ತಾರೆ. ಅವರು ನಿನ್ನೆ ನನ್ನ ಜತೆ ಮಾತನಾಡಲು ಪ್ರಯತ್ನಿಸಿದರು. ಆದರೆ ನನಗೆ ಸಮಯ ಇರದ ಕಾರಣ ಅದು ಸಾಧ್ಯವಾಗಲಿಲ್ಲ. ಐಟಿ ದಾಳಿ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಆಮೇಲೆ ಮಾತನಾಡುತ್ತೇನೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Acidity : ಅಸಿಡಿಟಿಯಿಂದ ಬಳಲುತ್ತಿದ್ದೀರಾ ? ಇದನ್ನು ದಿನಕ್ಕೆ ಎರಡು ಬಾರಿ ಮಾಡಿ..!

  ಸುದ್ದಿಒನ್ : ಕೆಲವರು ಸ್ವಲ್ಪ ತಿಂದ ನಂತರ ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಾರೆ. ಇದು ದೇಹದ ಅಸ್ವಸ್ಥತೆ ಮತ್ತು ಎದೆಯುರಿ ಉಂಟುಮಾಡುತ್ತದೆ. ಈ ಹಠಾತ್ ಸಮಸ್ಯೆಯಿಂದ ಪರಿಹಾರ ಪಡೆಯಲು ಈ ಕೆಳಗಿನ ಮನೆಮದ್ದುಗಳನ್ನು ಪ್ರಯತ್ನಿಸಿ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ

ಈ ರಾಶಿಯವರ ದಾಂಪತ್ಯ ಹಾಲು ಜೇನು ಸೇರಿದ ಹಾಗೆ, ಶನಿವಾರ- ರಾಶಿ ಭವಿಷ್ಯ ಅಕ್ಟೋಬರ್-5,2024 ಸೂರ್ಯೋದಯ: 06:10, ಸೂರ್ಯಾಸ್ತ : 05:58 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿನ್ ಅಯಣ ಶರದ

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

error: Content is protected !!