ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಾಮರಾಜನಗರ: ವಿಧಾನಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದೆ. ಅಧಿಕಾರಕ್ಕಾಗಿ ಭರ್ಜರಿ ಪ್ರಚಾರದ ಜೊತೆಗೆ ಜನರಿಗೆ ಆಮಿಷಗಳನ್ನು ಒಡ್ಡುವುದು ಜಾಸ್ತಿಯಾಗುತ್ತಾ ಇದೆ. ಈಗ ಅಭ್ಯರ್ಥಿಗಳ ಜೊತೆಗೇನೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡರಾ ಎಂಬ ಅನುಮಾನ ಕಾಡುವಂತೆ ಮಾಡಿದೆ ಒಂದು ಆಡಿಯೋ.
ವಿ ಸೋಮಣ್ಣ ಅವರು ಈ ಬಾರಿ ಎರಡು ಕಡೆ ಸ್ಪರ್ಧೆ ನಡೆಸಿದ್ದಾರೆ. ಒಂದು ಸಿದ್ದರಾಮಯ್ಯ ವಿರುದ್ಧ ವರುಣಾ ಕ್ಷೇತ್ರ ಹಾಗೂ ಚಾಮರಾಜನಗರ. ಈಗ ವೈರಲ್ ಆಗಿರುವ ಸೋಮಣ್ಣ ಅವರದ್ದೇ ಎನ್ನಲಾದ ಆಡಿಯೋ ಬಂದು, ಚಾಮರಾಜನಗರ ಜಿಲ್ಲೆಗೆ ಸಂಬಂಧಿಸಿದ್ದು. ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿ ಅವರಿಗೆ ಸೋಮಣ್ಣ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಆಡಿಯೋವೊಂದು ವೈರಲ್ ಆಗಿದೆ.
ಆ ಆಡಿಯೋದಲ್ಲಿ ಹೀಗದೆ, “ತೊಟ್ಟಿ ನನ್ನ ಮಗನ ಮಾತು ಕೇಳಿ ನಿಂತಿದ್ದೀಯಾ. ಮೊದಲು ತೆಗಿ ಆಮೇಲೆ ಎಲ್ಲಾ ಮಾತನಾಡೋಣಾ. ನಿನ್ನ ಬದುಕಿಗೆ ಏನು ಬೇಕೋ ಅದನ್ನು ಮಾಡುತ್ತೇನೆ. ಹಿತ ಕಾಪಾಡುತ್ತೇನೆ” ಎಂದು ಆ ಆಡಿಯೋದಲ್ಲಿ ಇದೆ. ಇದು ಸೋಮಣ್ಣ ಅವರೇ ಮಾತನಾಡಿರುವ ಮಾತಾ ಎಂಬುದನ್ನು ಅವರೇ ದೃಢಪಡಿಸಬೇಕಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್