Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕನ್ನಡದಲ್ಲೇ ಭಾಷಣ ಶುರು ಮಾಡಿದ ಪ್ರಧಾನಿ.. ಕಾಂಗ್ರೆಸ್, ಜೆಡಿಎಸ್ ಬಗ್ಗೆ ಹೊಸದಾಗಿ ಏನು ಹೇಳಿದ್ರು..?

Facebook
Twitter
Telegram
WhatsApp

 

ಕೋಲಾರ: ರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಹತ್ತು ದಿನ ಬಾಕಿ ಇದೆ. ಭರ್ಜರಿ ಪ್ರಚಾರದಲ್ಲಿ ತೊಡಗಿರುವ ರಾಜಕಾರಣಿಗಳು ಜನರ ಬಳಿ ವಿರೋಧ ಪಕ್ಷಗಳ ವಿರುದ್ಧ ಗುಡುಗುತ್ತಿದ್ದಾರೆ. ಇಂದು ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಬಂದಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದಾರೆ. ಇಂದು ರಾಜ್ಯದ ಹಲವು ಜಿಲ್ಲೆಗಳಿಗೆ ಹೋಗಿ ಪ್ರಚಾರ ನಡೆಸಲಿದ್ದಾರೆ. ಸದ್ಯ ಕೋಲಾರದಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಪ್ರಧಾನಿ ಮೋದಿ, ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಹರಿಹಾಯ್ದಿದ್ದಾರೆ.

ಕೋಲಾರದ ಜನತೆಗೆ ಕನ್ನಡದಲ್ಲಿಯೇ ಮಾತನಾಡಿಸಿದ ಪ್ರಧಾನಿ ಬಳಿಕ, ಮೇ 13ಕ್ಕೆ ಮತದಾರರು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ಕ್ಲೀನ್ ಬೋಲ್ಡ್ ಮಾಡಲಿದ್ದಾರೆ. ಇಲ್ಲಿ ಸೇರಿರುವ ಅಪಾರ ಜನರನ್ನು ನೋಡಿದ್ರೆ ಕಾಂಗ್ರೆಸ್, ಜೆಡಿಎಸ್ ನಿದ್ದೆಗೆಡಿಸುವುದು ಗ್ಯಾರಂಟಿ. ಎರಡು ಪಕ್ಷಗಳು ಅಭಿವೃದ್ಧಿಗೆ ಕಂಟಕಪ್ರಾಯವಾಗಿದ್ದವು. ಕರ್ನಾಟಕದ ಜನತೆ ಈ ಬಾರಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ಕ್ಲೀನ್ ಬೋಲ್ಡ್ ಮಾಡುತ್ತಾರೆ.

ಈ ಚುನಾವಣೆ ಕೇವಲ 5 ವರ್ಷಕ್ಕೆ ಎಂಎಲ್ಎ ಆಯ್ಕೆ ಮಾಡುವ ಚುನಾವಣೆಯಲ್ಲ. 25 ವರ್ಷಗಳ ಕಾಲ ರಾಜ್ಯದ ಅಭಿವೃದ್ಧಿಯ ಧಿಕ್ಕನ್ನು ಬದಲಾಯಿಸುವ ಚುನಾವಣೆ. ಕರ್ನಾಟಕದಲ್ಲಿ ಅಸ್ಥಿರ ಸರ್ಕಾರ ಬಂದ್ರೆ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ. ಡಬಲ್ ಎಂಜಿನ್ ಸರ್ಕಾರದಿಂದ ಮಾತ್ರ ಅಭಿವೃದ್ಧಿ ಮಾಡಲು ಸಾಧ್ಯ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಭಾ ಮಲ್ಲಿಕಾರ್ಜುನ್ ಗೆದ್ದರೆ ನಾನು ಗೆದ್ದಂಗೆ: ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದರೆ ಮುಖ್ಯಮಂತ್ರಿಯಾಗಿ ನನಗೆ ಹೆಚ್ಚು ಶಕ್ತಿ ಬರುತ್ತದೆ: ದಾವಣಗೆರೆಯಲ್ಲಿ  ಸಿ.ಎಂ. ಸಿದ್ದರಾಮಯ್ಯ ಹೇಳಿಕೆ

ದಾವಣಗೆರೆ ಮೇ 4: ನನ್ನ ಮತ್ತು ಕನಕಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ತಿರಸ್ಕರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ನನ್ನು ನೀವೆಲ್ಲರೂ ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಇಲ್ಲಿ ನಡೆದ

ಬೆಂಗಳೂರಿನಲ್ಲಿ 3 ದಿನ ಸಾಧಾರಣ ಮಳೆ‌: ಉಳಿದಂತೆ ಎಲ್ಲೆಲ್ಲಿ ಎಷ್ಟು ಮಳೆ ಸಾಧ್ಯತೆ..?

ಬೆಂಗಳೂರು: ಬಿಸಿಬಿಸಿ ಎನ್ನುತ್ತಿದ್ದ ಬೆಂಗಳೂರು ಮಂದಿಗೆ ನಿನ್ನೆ ವರುಣರಾಯ ತಂಪೆರೆದಿದ್ದ. ಮಧ್ಯಾಹ್ನವೇ‌ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು. ಕತ್ತಲು ಕವಿದಿತ್ತು. 3 ಗಂಟೆಯ ವೇಳೆಗೆ ಎಲ್ಲೆಲ್ಲೂ ಜೋರು ಮಳೆಯಾಗಿತ್ತು. ಮಳೆ ಕಂಡು ಬೆಂಗಳೂರು ಮಂದಿ

error: Content is protected !!