Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾಸನದಲ್ಲಿ ಜೆಡಿಎಸ್ ಬಗ್ಗೆ ವ್ಯಂಗ್ಯವಾಡಿದ ಪ್ರಧಾನಿ ನರೇಂದ್ರ ಮೋದಿ..!

Facebook
Twitter
Telegram
WhatsApp

ಹಾಸನ: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ನಾಯಕರು ಕೂಡ ಹಳೆ ಮೈಸೂರು ಭಾಗವನ್ನು ಗೆಲ್ಲುವುದಕ್ಕಾಗಿ ಕಸರತ್ತು ನಡೆಸುತ್ತಿದೆ. ಹೇಳಿ ಕೇಳಿ ಹಳೇ ಮೈಸೂರು ಭಾಗ ಜೆಡಿಎಸ್ ನ ಭದ್ರಕೋಟೆ ಇದ್ದಂತೆ. ಹಾಸನದಲ್ಲೂ ಜೆಡಿಎಸ್ ಪ್ರಾಬಲ್ಯವಿದೆ. ಆದರೆ ಈ ಬಾರಿ ಬಿಜೆಪಿ ಒಂದು ಕ್ಷೇತ್ರ ಕಬಳಿಸಿದೆ. ಪ್ರೀತಂ ಗೌಡ ಆ ಕ್ಷೇತ್ರದ ಶಾಸಕರಾಗಿದ್ದಾರೆ. ಈ ಬಾರಿ ಅದನ್ನೂ ಪಡೆಯಲೇಬೇಕೆಂದು ದೊಡ್ಡ ಗೌಡರ ಕುಟುಂಬಸ್ಥರು ಮನಸ್ತಾಪ ಮರೆತು ಒಂದಾದರೆ, ಈ ಕಡೆ ಪ್ರಧಾನಿ ಮೋದಿ ಅವರು ಅದೇ ಜೆಡಿಎಸ್ ಕೋಟೆಗೆ ಇಂದು ಭೇಟಿ ನೀಡಿದ್ದಾರೆ. ಜೆಡಿಎಸ್ ವಿರುದ್ಧ ಅಬ್ಬರಿಸಿ, ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಉಚ್ಛರಿಸಿದ್ದಾರೆ.

 

ಬೇಲೂರಿನಲ್ಲಿ ತಮ್ಮ ಅಭ್ಯರ್ಥಿ ಪರ ಪ್ರಚಾರ ಮಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ – ಜೆಡಿಎಸ್ ಗೆ ಮತ ಹಾಕಿದರೆ ಕರ್ನಾಟಕದ ಭವಿಷ್ಯದ ಬಾಗಿಲು ಮುಚ್ಚಿದಂತೆಯೇ. ಕಾಂಗ್ರೆಸ್ – ಜೆಡಿಎಸ್ ನಡುವೆ ವಿಚಿತ್ರವಾದ ಸಮಾನತೆ ಇದೆ. ಏನೆಂದರೆ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ನೆಲೆಸಿರುವ ಒಂದು ಪರಿವಾರದ ಸೇವೆ ಮಾಡುತ್ತಿದ್ದಾರೆ. ಯಾರು ಕುಟುಂಬದ ಸೇವೆ ಮಾಡುತ್ತಾರೋ..? ಯಾರು ಆ ಕುಟುಂಬಕ್ಕೆ ಹತ್ತಿರ ಇರುತ್ತಾರೊ..? ಯಾರು ಆ ಪರಿಹಾರಕ್ಕೆ ಮಂಡಿಯೂರಿ ಕೂರುತ್ತಾರೋ..? ಅಂತಹವೆಇಗೆ ಮಾತ್ರ ಕಾಂಗ್ರೆಸ್ ನಲ್ಲಿ ಸ್ಥಾನ- ಮಾನ ಸಿಗಲಿದೆ.

ಜೆಡಿಎಸ್ ಕೂಡ ಒಂದು ರೀತಿಯ ಪ್ರೈವೆಟ್ ಲಿಮಿಟೆಡ್. ಇಲ್ಲಿ ಕುಟುಂಬ ಅಭಿವೃದ್ಧಿಗೆ ಮಾತ್ರ ಒತ್ತು ಸಿಗಲಿದೆ. ಇಲ್ಲಿ ಜನರ ಹಿತ ಇಲ್ಲ. ಪರಿವಾರದ ಹಿತಾಸಕ್ತಿ ನಡೆಯುತ್ತದೆ. ಕುಟುಂಬಕ್ಕಾಗಿ ಕರ್ನಾಟಕದ ತುಂಬೆಲ್ಲಾ ಹೋರಾಟ ನಡೆಯುತ್ತದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!