Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗದಲ್ಲಿ ಮೇ 2 ರಂದು ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ :  ಸಾರ್ವಜನಿಕರಿಗೆ ವಿಶೇಷ ಸೂಚನೆ ಮತ್ತು ಸಂಚಾರ ಮಾರ್ಗ ಬದಲಾವಣೆಯ ಮಾಹಿತಿ…!

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಏ.30) :  ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇ.2 ರಂದು ಚಿತ್ರದುರ್ಗ ನಗರಕ್ಕೆ ಆಗಮಿಸಲಿದ್ದು, ನಗರದ ಮುರುಘ ರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಆವರಣ)ದಲ್ಲಿ, ಬಿ.ಜೆ.ಪಿ.ಪಕ್ಷದ ವತಿಯಿಂದ ಆಯೋಜಿಸಿರುವ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು.

ಅತಿ ಗಣ್ಯರ ಭದ್ರತಾ‌ ದೃಷ್ಟಿ ಹಾಗೂ ಸುಗಮ ಸಂಚಾರದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ವಿಶೇಷ ಸೂಚನೆ ನೀಡಿ, ನಗರದ ಸಂಚಾರ ಮಾರ್ಗ ಬದಲಾವಣೆ ಮಾಡಿ ಹಾಗೂ ಪಾರ್ಕಿಂಗ್ ಸ್ಥಳ ನಿಗದಿ ಪಡಿಸಿ ಆದೇಶ ಹೊರಡಿಸಿದ್ದಾರೆ.

*ಸಾರ್ವಜನಿಕರಿಗೆ ಸೂಚನೆ*

ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರು ಬೆಂಕಿಪೊಟ್ಟಣ, ಲೈಟರ್  ಸೇರಿದಂತೆ ಯಾವುದೇ ಸ್ಫೋಟಕ ವಸ್ತುಗಳು, ನೀರಿನ ಬಾಟಲ್ ಮತ್ತು ಬ್ಯಾಗ್ ಹಾಗೂ ಅಪಾಯ ಉಂಟುಮಾಡುವ ವಸ್ತುಗಳನ್ನು ತರುವಂತಿಲ್ಲ. ಕಪ್ಪುಬಟ್ಟೆ ಧರಿಸಿ ಕಾರ್ಯಕ್ರಮಕ್ಕೆ ಬರುವಂತಿಲ್ಲ. ಯಾವುದೇ ಭಿತ್ತಿ ಪತ್ರ, ಕರ ಪತ್ರಗಳನ್ನು ತರುವಂತಿಲ್ಲ.

*ಸಂಚಾರ ಮಾರ್ಗ ಬದಲಾವಣೆ*

ವಿಮಾನದ ಮೂಲಕ ಚಳ್ಳಕೆರೆ ತಾಲ್ಲೂಕು ಕುದಾಪುರದ ಬಳಿ ಇರುವ ಡಿಆರ್‌ಡಿಓಗೆ ಆಗಮಿಸುವ ಪ್ರಧಾನ ಮಂತ್ರಿಗಳು ನಂತರ ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗ ನಗರದ ಓನಕೆ ಓಬವ್ವ ಕ್ರೀಡಾಂಗಣಕ್ಕೆ ಆಗಮಿಸಿ, ಮುರುಘಾರಾಜೇಂದ್ರ ಕ್ರೀಡಾಂಗಣದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನಲೆಯಲ್ಲಿ ನಗರಕ್ಕೆ ಆಗಮಿಸುವ ಹಾಗೂ ಹೊರ ಹೋಗುವ ವಾಹನಗಳ ರಸ್ತೆ ಮಾರ್ಗಗಳನ್ನು ಬದಲಾಣೆ ಮಾಡಲಾಗಿದೆ.

ಸಮಾರಂಭಕ್ಕೆ ಬರುವ ವಾಹನಗಳನ್ನು ಹೊರತುಪಡಿಸಿ, ಚಿತ್ರದುರ್ಗಕ್ಕೆ ಬೆಂಗಳೂರು, ಕಡೆಯಿಂದ ಬರುವ ವಾಹನಗಳು ಕ್ಯಾದಿಗೆರೆಯಿಂದ ಹೊಸ ಬೈಪಾಸ್ ಮೂಲಕ ಸಂಚರಿಸಿ, ಎನ್.ಹೆಚ್.50 ಪಿಳ್ಳೆ ಕೇರನಹಳ್ಳಿ ಮೂಲಕ ಚಿತ್ರದುರ್ಗ ನಗರ ಪ್ರವೇಶಿಸುವುದು.

ದಾವಣಗೆರೆ ಕಡೆಯಿಂದ ಬರುವ ವಾಹನಗಳು ಜೆ.ಎಂ.ಐ.ಟಿ. ಸರ್ಕಲ್ ಮೂಲಕ ನಗರ ಪ್ರವೇಶಿಸುವುದು.

ಬೆಂಗಳೂರು, ಚಳ್ಳಕೆರೆ, ಹೊಸಪೇಟೆ, ದಾವಣಗೆರೆ ಕಡೆಗೆ ಚಲಿಸುವ ಕೆ.ಎಸ್‌.ಆರ್.ಟಿ.ಸಿ, ಮತ್ತು ಇತರ ವಾಹನಗಳು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ಜಿ.ಎಂ.ಐ.ಟಿ, ಸರ್ಕಲ್ ಮೂಲಕ ಸೀಬಾರ ಕ್ರಾಸ್ ಅಥವಾ ಎನ್.ಹೆಚ್.50 ಮೂಲಕ ಹೊಸ ಬೈಪಾಸ್‌ ರಸ್ತೆ ಸೇರುವುದು.

ಶಿವಮೊಗ್ಗ, ದಾವಣಗೆರೆ ಚಳ್ಳಕೆರೆ, ಬೆಂಗಳೂರು, ಹೊಸಪೇಟೆ ಕಡೆಗೆ ಚಲಿಸುವ ಖಾಸಗಿ ಬಸ್‌ ಹಾಗೂ ಇತರೆ ವಾಹನಗಳು ಎ.ಪಿ.ಎಂ.ಸಿ. ಮೆದೇಹಳ್ಳಿ ರಸ್ತೆ ಮೂಲಕ ಹಾಯ್ದು ಸೀಬಾರ ಕ್ರಾಸ್ ಅಥವಾ ಎನ್‌.ಹೆಚ್.50 ಮೂಲಕ ಹೊಸ ಬೈಪಾಸ್‌ ಸೇರುವುದು. ನಗರದ ಚಳ್ಳಕೆರೆ ಕ್ರಾಸ್‌ನಿಂದ ಮದಕರಿ ವೃತ್ತದವರೆಗಿನ ರಸ್ತೆಯಲ್ಲಿ ವಿ.ಐ.ಪಿ, ಪಾಸ್ ಹೊಂದಿದ ವಾಹನಗಳನ್ನು ಹೊರತುಪಡಿಸಿ ಉಳಿದೆಲ್ಲಾ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

*ಪಾರ್ಕಿಂಗ್ ಸ್ಥಳಗಳು*

ಕಾರ್ಯಕ್ರಮ ಸ್ಥಳಕ್ಕೆ ಬೆಂಗಳೂರು, ಹಿರಿಯೂರು ಕಡೆಯಿಂದ ಆಗಮಿಸುವ ವಾಹನಗಳು ಹಳೇ ಬೆಂಗಳೂರು ರಸ್ತೆಯಲ್ಲಿ ಪಾರ್ಕಿಂಗ್ ಮಾಡಬೇಕು
ಬಳ್ಳಾರಿ ಹಾಗೂ ಚಳ್ಳಕೆರೆ ಕಡೆಯಿಂದ ಆಗಮಿಸುವ ವಾಹನಗಳು ಶನೇಶ್ವರ ದೇವಸ್ಥಾನ, ಶ್ರೀರಾಮಕಲ್ಯಾಣ ಮಂಟಪದ ಬಳಿ ಪಾರ್ಕ್ ಮಾಡಬೇಕು. ತುರುವನೂರು ಕಡೆಯಿಂದ ಬರುವ ವಾಹನಗಳು ವೆಂಕಟೇಶ್ವರ ಸ್ವಾಮಿ ದೇವಾಲಯದ ಅವರಣದಲ್ಲಿ ಪಾರ್ಕ್ ಮಾಡುವುದು.

ಹೊಸಪೇಟೆ, ಜಗಳೂರು, ದಾವಣಗೆರೆ ಕಡೆಯಿಂದ ಬರುವ ವಾಹನಗಳನ್ನು ಪೊಲೀಸ್ ಸಮುದಾಯ ಭವನ‌ಹಾಗೂ ಕೆ.ಇ.ಬಿ. ಸಮುದಾಯ ಭವನದ ಬಳಿ ಪಾರ್ಕ್ ಮಾಡುಬೇಕು. ಶಿವಮೊಗ್ಗ ಹೊಳಲ್ಕೆರೆ ಕಡೆಯಿಂದ ಬರುವ ವಾಹನಗಳು ಮಾಳಪ್ಪನಹಟ್ಟಿ, ಮುರುಘಾ ಮಠ, ಜೆ.ಎಂ.ಐ.ಟಿ ರೈಲ್ವೆ ಕ್ರಾಸಿಂಗ್ ಮೂಲಕ ಸಂಚರಿಸಿ ಎ.ಪಿ.ಎಂ.ಸಿ.ಯಲ್ಲಿ ಪಾರ್ಕ್ ಮಾಡುಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...