ಡಿಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ : ತಪ್ಪಿದ ಅನಾಹುತ

1 Min Read

 

ಬೆಂಗಳೂರು :  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಹೊಸಕೋಟೆ ಬಳಿ ಹದ್ದು ಡಿಕ್ಕಿ ಹೊಡೆದು ಸ್ವಲ್ಪದರಲ್ಲೇ ಬಾರಿ ಅನಾಹುತ ತಪ್ಪಿದೆ.ಚುನಾವಣಾ ಪ್ರಚಾರಕ್ಕಾಗಿ ಮುಳಬಾಗಿಲಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಈ ಅಪಘಾತದಲ್ಲಿ (ಹೆಲಿಕಾಪ್ಟರ್ ಅಪಘಾತ) ಡಿಕೆ ಶಿವಕುಮಾರ್ ಜೊತೆಗಿದ್ದ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಜಕ್ಕೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದಿದ್ದು, ತಕ್ಷಣ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.

ಇದೇ ವೇಳೆ ಮೇ 10ರಂದು ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಇಂದು ಬಿಡುಗಡೆ ಮಾಡಿದೆ. ರೈತರು, ಮಹಿಳೆಯರು ಮತ್ತು ಯುವಕರಿಗೆ ದೊಡ್ಡ ಭರವಸೆಗಳನ್ನು ನೀಡಿದೆ.

ಜಾತಿ ಮತ್ತು ಧರ್ಮದ ಆಧಾರದ ಮೇಲೆ ಸಮುದಾಯಗಳ ನಡುವೆ ದ್ವೇಷ ಹರಡುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಬಜರಂಗದಳ ಮತ್ತು ನಿಷೇಧಿತ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಂತಹ ಸಂಘಟನೆಗಳು ಅಧಿಕಾರಕ್ಕೆ ಬಂದರೆ ಕಾನೂನು ಉಲ್ಲಂಘಿಸುವಂತಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks