Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಮಾಜಿ ನಗರಸಭೆ ಅಧ್ಯಕ್ಷ ಕೇಶವಮೂರ್ತಿ ನಿಧನ

Facebook
Twitter
Telegram
WhatsApp

 

ಚಿತ್ರದುರ್ಗ, (ಮೇ.02) : ನಗರದ ರೈಲ್ವೆ ಸ್ಟೇಷನ್ ಬಳಿಯಿರುವ ಸದಾನಂದಯ್ಯ ಬಡಾವಣೆಯ ನಿವಾಸಿ, ಮಾಜಿ ನಗರಸಭೆ ಅಧ್ಯಕ್ಷ ಕೇಶವಮೂರ್ತಿ(61) ಇಂದು (ಮೇ.02) ರಾತ್ರಿ 9 ಗಂಟೆ ಸುಮಾರಿಗೆ ಅನಾರೋಗ್ಯದಿಂದ ನಿಧನರಾದರು.

ಅವಿವಾಹಿತರಾಗಿದ್ದ ಇವರು 6 ಮಂದಿ ಸಹೋದರ ಮತ್ತು 4 ಮಂದಿ ಸಹೋದರಿಯರು ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ನಾಳೆ(ಮೇ.03) ಸದಾನಂದಯ್ಯ ಬಡಾವಣೆ ಸಮೀಪವಿರುವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

2001 ರಲ್ಲಿ 8 ತಿಂಗಳುಗಳ ಕಾಲ ಚಿತ್ರದುರ್ಗ ನಗರಸಭೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಸಂತಾಪ : ಕೇಶವಮೂರ್ತಿಯವರ ಅಗಲಿಕೆ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ,  ಅವರ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರು ಹಾಗೂ ಹಿತೈಷಿಗಳಿಗೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರ ಸಮಕಾಲೀನರಾದ ಹೆಚ್.ಜೆ. ಕೃಷ್ಣಮೂರ್ತಿ, ಹೆಚ್. ಮಂಜಪ್ಪ, ಬಿ.ಕಾಂತರಾಜ್, SBL ಮಲ್ಲಿಕಾರ್ಜುನ, ನಗರ ಸಭೆಯ ಮಾಜಿ ಅಧ್ಯಕ್ಷರುಗಳು, ಸದಸ್ಯರುಗಳು, ಹಿರಿಯ ಮುಖಂಡರು ಸೇರಿದಂತೆ ಜಿಲ್ಲೆಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!