Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

Lokayukta Raid | ಚಿತ್ರದುರ್ಗ : ಇ-ಸ್ವತ್ತು ಮಾಡಿಕೊಡಲು 5 ಸಾವಿರ ರೂ. ಲಂಚ, ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.03): ವ್ಯಕ್ತಿಯೊಬ್ಬರಿಂದ ಇ-ಸ್ವತ್ತು (e-swathu) ಮಾಡಿಕೊಡಲು ಲಂಚಕ್ಕೆ ಬೇಡಿಕೆಯಿಟ್ಟು, ಲಂಚ ಸ್ವೀಕರಿಸುತ್ತಿದ್ದ ವೇಳೆ  ಪಿ.ಡಿ.ಓ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನಲ್ಲಿ ನಡೆದಿದೆ.

ಹೊಸದುರ್ಗ ತಾಲ್ಲೂಕಿನ ದೊಡ್ಡ ಕಿಟ್ಟದಹಳ್ಳಿ ಗ್ರಾಮ ಪಂಚಾಯ್ತಿಯ ಪಿ.ಡಿ.ಓ ನರಸಿಂಹಪ್ಪ ಬಂಧಿತ ಆರೋಪಿ.

ಹೊಸದುರ್ಗ ತಾಲ್ಲೂಕಿನ ಸಣ್ಣಕಿಟ್ಟದಹಳ್ಳಿ ಗ್ರಾಮದ ರಾಜು ಅವರ ಸಹೋದರ
ಎನ್.ಮಹಾಲಿಂಗಪ್ಪ ಇವರ ಮನೆಯ ಇ-ಸ್ವತ್ತು ಮಾಡಿಕೊಡಲು, ಪಿ.ಡಿ.ಓ ನರಸಿಂಹಪ್ಪ ರೂ.5,000/- ನೀಡುವಂತೆ ಬೇಡಿಕೆ ಇಟ್ಟಿದ್ದರು.
ಈ ಸಂಬಂಧ ರಾಜು ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಅದರಂತೆ ಇಂದು (03-05-2003) ರಂದು ಹೊಸದುರ್ಗ ಟೌನ್‌ನಲ್ಲಿರುವ ಒಂದು ಖಾಸಗಿ ಕಂಪ್ಯೂಟರ್ ಅಂಗಡಿಯಲ್ಲಿ ಎನ್‌.ರಾಜು ಇವರಿಂದ ಲಂಚದ ಹಣ ರೂ.5,000/-ಗಳನ್ನು ಪಡೆಯುವಾಗ ಪಿಡಿಓ ನರಸಿಂಹಪ್ಪನನ್ನು ಸಿಕ್ಕಿಬಿದ್ದಿರುತ್ತಾನೆ. ಹಣವನ್ನು ಲೋಕಾಯುಕ್ತ ಪೊಲೀಸರು ಜಪ್ತಿ ಮಾಡಿ ಬಂಧಿಸಿದ್ದಾರೆ.

ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎನ್. ವಾಸುದೇವರಾಮ ಇವರ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿ ಆಪಾದಿತರನ್ನು ಬಂಧಿಸಲಾಗಿರುತ್ತದೆ.

ಚಿತ್ರದುರ್ಗ ಲೋಕಾಯುಕ್ತ ಕಛೇರಿಯ ಪೊಲೀಸ್ ಉಪಾಧೀಕ್ಷಕರಾದ ಶ್ರೀ.ಎನ್.ಮೃತ್ಯುಂಜಯ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರುಗಳಾದ ಶ್ರೀಮತಿ ವೈ.ಎಸ್ ಶಿಲ್ಪಾ, ಶ್ರೀ ಆರ್.ವಸಂತ ಕುಮಾರ್ ಮತ್ತು ಶ್ರೀಮತಿ ಬಿ.ಕೆ.ಲತಾ ಹಾಗೂ ಮೊಲೀಸ್ ಸಿಬ್ಬಂದಿಗಳಾದ ಶ್ರೀ ಜೆ.ಎಂ.ತಿಪ್ಪೇಸ್ವಾಮಿ, ಸಿ.ಹೆಚ್.ಸಿ, ಶ್ರೀ ಹೆಚ್.ಶ್ರೀನಿವಾಸ, ಸಿ.ಹೆಚ್.ಸಿ., ಶ್ರೀಮತಿ ಎಸ್.ಆರ್.ಮುಷ್ಟ, ಮ.ಹೆಚ್.ಸಿ., ಶ್ರೀ ಎಲ್.ಜಿ.ಸತೀಶ, ಸಿಪಿಸಿ, ಶ್ರೀ ಜಿ.ಎನ್‌.ಸಂತೋಷ್ ಕುಮಾರ್, ಸಿಪಿಸಿ ಶ್ರೀ ಎಂ.ವೀರೇಶ್, ಸಿಪಿಸಿ, ಶ್ರೀ ಆರ್.ವೆಂಕಟೇಶ್‌ಕುಮಾರ್, ಎಪಿಸಿ, ಶ್ರೀ ಟಿ.ವಿ.ಸಂತೋಷ್, ಎಪಿಸಿ ಶ್ರೀ ಡಿ.ಮಾರುತಿ, ಎಪಿಸಿ ಮತ್ತು ಶ್ರೀ ಎನ್.ಎಲ್.ಶ್ರೀಪತಿ, ಎಪಿಸಿ ಇವರುಗಳು ಹಾಜರಿದ್ದು ಕರ್ತವ್ಯ ನಿರ್ವಹಿಸಿರುತ್ತಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!