ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮಂಡ್ಯ: ಮತದಾನಕ್ಕೆ ದಿನಗಣನೆ ಶುರುವಾಗಿದೆ. ಜನರಿಗೆ ಹಣದ ಆಮಿಷ ತೋರಿಸುವ ಅಭ್ಯರ್ಥಿಗಳಿಗೇನು ಕಡಿಮೆ ಇಲ್ಲ. ಅದಕ್ಕಾಗಿಯೇ ಪೊಲೀಸರು, ಚುನಾವಣಾ ಅಧಿಕಾರಿಗಳು ಎಲ್ಲಾ ಅಭ್ಯರ್ಥಿಗಳು, ಅಭ್ಯರ್ಥಿಗಳ ಬೆಂಬಲಿಗರು, ಆತ್ಮೀಯರ ಮೇಲೆ ಕಣ್ಣಿಟ್ಟಿದ್ದಾರೆ. ಇದೀಗ ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಗನ ಮನೆ ಮೇಲೆ ದಾಳಿ ನಡೆದಿದೆ.
ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ ಎಂ ಉದಯ್ ಬೆಂಬಲಿಗ ಸುರೇಶ್ ಬಾಬು ಮನೆ ಮೇಲೆ ದಾಳಿ ನಡೆಸಲಾಗಿದೆ. ಇಂದು ಬೆಳಗ್ಗೆ 5.30ಕ್ಕೆ ಪಕ್ಕಾ ಮಾಹಿತಿ ಪಡೆದ ಫ್ಲೈಯಿಂಗ್ ಸ್ಕ್ವಾಡ್ ಟೀಂ ದಾಳಿ ನಡೆಸಿದೆ. ಅಷ್ಟೇ ಅಲ್ಲದೆ ಇನ್ನಷ್ಟು ಬೆಂಬಲಿಗರ ಮನೆ ಮೇಲೆ ದಾಳಿ ನಡೆಸಲಾಗಿದೆ.
ಇನ್ನು ಸುರೇಶ್ ಬಾಬು ಅವರ ಮನೆಯಲ್ಲಿಯೇ ಸುಮಾರು ಎರಡು ಕೋಟಿ ಹಣ ಸಿಕ್ಕಿದೆ. ಮದ್ದೂರು ಕ್ಷೇತ್ರದ ದೊಡ್ಡ ಬೀದಿಯಲ್ಲಿ ಸುರೇಶ್ ಬಾಬು ಅವರ ಮನೆ ಇದೆ. ಮನೆಯ ಅಟ್ಟದ ಮೇಲೆ ಕಂತೆ ಕಂತೆ ಹಣ ಇಟ್ಟಿದ್ದರು ಎನ್ನಲಾಗಿದೆ. ಉದಯ್, ರಮೇಶ್, ಸುರೇಶ್ ಎಂಬುವವರ ಮನೆಯಲ್ಲೆಲ್ಲಾ ದಾಳಿ ನಡೆಸಿದಾಗ ಎರಡು ಕೋಟಿ ಹಣ ಸಿಕ್ಕಿದೆ. ಸುರೇಶ್ ಬಾಬು ಅವರನ್ನು ಸದ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್