Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇದ್ದಕ್ಕಿದ್ದಂತೆ ಡೆಲಿವರಿ ಬಾಯ್ ಗಾಡಿ ಹತ್ತಿದ ರಾಹುಲ್ ಗಾಂಧಿ : ಭಯ, ಖುಷಿಯಲ್ಲೇ ಗಾಡಿ ಓಡಿಸಿದ ವ್ಯಕ್ತಿ..!

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಎರಡೇ ದಿನ ಬಾಕಿ ಇದೆ. ಭರ್ಜರಿ ಪ್ರಚಾರಕ್ಕೂ ಸಮಯ ಕಡಿಮೆ ಇರುವ ಕಾರಣ ರಾಜಕೀಯ ಪಕ್ಷಗಳು ಸಿಕ್ಕಾಪಟ್ಟೆ ಅಬ್ಬರದ ಪ್ರಚಾರ ನಡೆಸುತ್ತಿವೆ. ಇಂದು ರಾಹುಲ್ ಗಾಂಧಿ ಕೂಡ ನಗರದಾದ್ಯಂತ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ಹಮ್ಮಿಕೊಂಡಿದ್ದರು. ಈ ವೇಳೆ ಡೆಲಿವರಿ ಬಾಯ್ ಬಳಿ ರಾಹುಲ್ ಗಾಂಧಿ ಡ್ರಾಪ್ ತೆಗೆದುಕೊಂಡಿರುವ ಘಟನೆ ನಡೆದಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಏರ್ ಲೈನ್ಸ್ ಹೊಟೇಲ್ ನಿಂದ ಶಾಂಘ್ರಿಲಾಗೆ ಹೋಗಬೇಕಿತ್ತು. ಹೊಟೇಲ್ ನಿಂದ ಹೊರ ಬಂದಾಗ ಫುಡ್ ಡೆಲಿವರಿ ಬಾಯ್ ಕಂಡಿದ್ದಾರೆ. ತಕ್ಷಣ ಅವರ ಬಳಿ ಡ್ರಾಪ್ ಕೇಳಿದ್ದಾರೆ. ರಾಹುಲ್ ಗಾಂಧಿ ಅವರನ್ನು ಕಂಡು ಫುಡ್ ಡೆಲಿವರಿ ಬಾಯ್ ಅಂತು ಶಾಕ್ ಆಗಿದ್ದಾನೆ. ಆದರೂ ಅವರು ಗಾಡಿ ಹತ್ತಿದಾಗ ಖುಷಿ ಮತ್ತು ಭಯದಿಂದಾನೇ ಗಾಡಿ ಓಡಿಸಿದ್ದಾನೆ. ರಾಹುಲ್ ಗಾಂಧಿ ಅವರು ಹೆಲ್ಮೆಟ್ ಧರಿಸಿಯೇ ಗಾಡಿ‌ ಮೇಲೆ ಕೂತಿದ್ದಾರೆ.

ಯಾವುದೇ ರೀತಿಯ ಭದ್ರತೆ ಇಲ್ಲದೆ ಬೆಂಗಳೂರಿನ ರಸ್ತೆಯ ಇಕ್ಕೆಲಗಳಲ್ಲಿ ರಾಹುಲ್ ಗಾಂಧಿ ಸಂಚರಿಸಿದರು. ಜಾಲಿ ರೈಡ್ ನಲ್ಲಿ ರಾಹುಲ್ ಗಾಂಧಿ ಸ್ಕೂಟರ್ ನಲ್ಲಿ ಹೋಗ್ತಾ ಇದ್ರೆ, ಸ್ಕೂಟರ್ ಹಿಂದೆ ಓಡಿ ಓಡಿ ಭದ್ರತಾ ಸಿಬ್ಬಂದಿ ಸುಸ್ತಾಗಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!