Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲೆಯಲ್ಲಿ ಈವರೆಗೂ ಮೊಳಕಾಲ್ಮೂರಿನಲ್ಲೇ ಹೆಚ್ಚು ಮತದಾನ : ಉಳಿದ ಕ್ಷೇತ್ರಗಳ ವಿವರ ಇಂತಿದೆ…!

Facebook
Twitter
Telegram
WhatsApp

 

 

ಚಿತ್ರದುರ್ಗ : ವಿಧಾನಸಭಾ ಚುನಾವಣೆ ಬೆಳಿಗ್ಗೆ 11 ಗಂಟೆಯವರೆಗಿನ ಮತದಾನ ವಿವರ

ಚಿತ್ರದುರ್ಗ, (ಮೇ.10) : ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ಮತದಾನ ಭರದಿಂದ ಸಾಗುತ್ತಿದೆ. ಬೆಳಿಗ್ಗೆಯಿಂದಲೇ ಜನರು ಸರತಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ.

ಬೆಳಗ್ಗೆ ಹನ್ನೊಂದು ಗಂಟೆಗೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ದಾಖಲಾದ ಅಂದಾಜು ಶೇಕಡಾವಾರು ಮತದಾನ ಇಂತಿದೆ:

97 – ಮೊಳಕಾಲ್ಮೂರು – ಶೇ.24.64

98 – ಚಳ್ಳಕೆರೆ -ಶೇ.16.35

99 – ಚಿತ್ರದುರ್ಗ- ಶೇ.20.47

100 – ಹಿರಿಯೂರು-ಶೇ. 13.40

101 – ಹೊಸದುರ್ಗ-ಶೇ.16.91

102 – ಹೊಳಲ್ಕೆರೆ -ಶೇ.18.93

ಜಿಲ್ಲೆಯಲ್ಲಿ ಸರಾಸರಿ ಶೇ.18.56 ರಷ್ಟು ಮತದಾನ ಆಗಿದೆ.

ಜಿಲ್ಲಾಧಿಕಾರಿ ದಿವ್ಯಪ್ರಭು .ಜಿ.ಆರ್.ಜೆ, ಜಿ.ಪಂ.ಸಿಇಓ ಎಂ.ಎಸ್.ದಿವಾಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ ಅವರು ನಗರದ ಸೆಂಟ್ ಜೋಸೆಫ್ ಕಾನ್ವೆಂಟ್‌ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಚಿತ್ರದುರ್ಗ ವಿಧಾನಕ್ಷೇತ್ರ ಗೋನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸ್ಥಾಪಿಸಿರುವ ಸಖಿ ಮತಗಟ್ಟೆ(27)ನಲ್ಲಿ ಮಹಿಳೆಯರು ಸರಿತಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಮತ ಚಲಾಯಿಸುವುದು ಕಂಡುಬಂದಿತು. ಒಟ್ಟು 1382 ಮತದಾರರು ಇದ್ದು, ಇದರಲ್ಲಿ ಬೆಳಿಗ್ಗೆ 11 ಗಂಟೆಯ ವೇಳೆಗೆ 143 ಪುರುಷ ಹಾಗೂ 146 ಮಹಿಳೆಯರು ಸೇರಿ ಒಟ್ಟು 289 ಮತದಾರರು ಮತಚಲಾಯಿಸಿದ್ದಾರೆ.

ಮತಗಟ್ಟೆಯಲ್ಲಿ ಬಿಸಿಲಿಂದ ರಕ್ಷಣೆಗಾಗಿ ಶಾಮಿಯಾನ, ವಿಕಚೇತನರು ಹಾಗೂ ಹಿರಿಯ ನಾಗರಿಕರಿಗೆ ಆಸನ, ವೀಲ್ ಚೇರ್ ವ್ಯವಸ್ಥೆ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!