Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಮೇ.10) : ಇಲ್ಲಿನ ರೋಟರಿ ಬಾಲಭವನದ ಸಮೀಪವಿರುವ ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಕಚೇರಿಯಲ್ಲಿ ಬುಧವಾರ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು.

ಹೇಮರಡ್ಡಿ ಮಲ್ಲಮ್ಮ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಅಧ್ಯಕ್ಷ ಚಿದಾನಂದಪ್ಪ ಆರು ನೂರು ವರ್ಷಗಳ ಹಿಂದೆ ಶ್ರೀಶೈಲದ ವೆಲಟೂರು ಜಿಲ್ಲೆಗೆ ಸೇರಿದ ರಾಮಪುರದಲ್ಲಿ ರಾಮರೆಡ್ಡಿ ಗೌರಮ್ಮ ದಂಪತಿಗಳ ಮಗಳಾಗಿ ಜನಿಸಿದ ಹೇಮರಡ್ಡಿ ಮಲ್ಲಮ್ಮ ಚನ್ನಮಲ್ಲಿಕಾರ್ಜುನನ ಭಕ್ತೆಯಾಗಿದ್ದಳು.

ವಿವಾಹದ ನಂತರ ತನ್ನ ಅತ್ತೆ, ನಾದಿನಿಯವರ ಕಾಟವನ್ನು ಸಹಿಸಿಕೊಂಡು ಎಲ್ಲರ ಮನಗೆದ್ದಂತ ಮಹಾನ್ ಶಿವಶರಣೆ ಎಂದು ಸ್ಮರಿಸಿದರು.

ಹೇಮರಡ್ಡಿ ಮಲ್ಲಮ್ಮ ಕೇವಲ ಶಿವಶರಣೆಯಷ್ಟೆ ಅಲ್ಲ. ತ್ಯಾಗ, ಪರಾಕ್ರಮ, ಶ್ರದ್ದೆ, ಭಕ್ತಿಗೆ ಹೆಸರಾಗಿದ್ದವರು. ಅವರ ತತ್ವ ಸಿದ್ದಾಂತಗಳನ್ನು ಜೀವನದಲ್ಲಿ ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ವೀರಶೈವ ಲಿಂಗಾಯತ ಹೇಮರಡ್ಡಿ ಮಲ್ಲಮ್ಮ ಸಮಾಜದ ಕಾರ್ಯದರ್ಶಿ ಟಿ.ಟಿ.ಶಿವಾನಂದಪ್ಪ, ಉಪ ಕಾರ್ಯದರ್ಶಿ ಸತೀಶ್, ಖಜಾಂಚಿ ಬಸವರಾಜಪ್ಪ, ನಿರ್ದೇಶಕರುಗಳಾದ ನ್ಯಾಯವಾದಿ ವಿಶ್ವನಾಥ್, ಆರ್.ಡಿ.ತಿಪ್ಪೇಸ್ವಾಮಿ, ಡಾ.ಮಹಂತೇಶ್, ಶಶಿಧರ್, ವಕೀಲರುಗಳಾದ ನೀತಜ, ರಘು, ದಯಾನಂದಪಾಟೀಲ್, ನಾಗರಾಜ್ ಸಂಗಂ, ಸಮಾಜದ ಎಲ್ಲಾ ಬಂಧುಗಳು ಜಯಂತಿಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

error: Content is protected !!