Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಪರೇಷನ್ ಕಮಲದ ಸುಳಿವು ಬಿಟ್ಟು ಕೊಟ್ರಾ ಆರ್ ಅಶೋಕ್..?

Facebook
Twitter
Telegram
WhatsApp

 

ಬೆಂಗಳೂರು: ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದೆ. ಫಲಿತಾಂಶಕ್ಕೆ ಇನ್ನೊಂದೇ ದಿನ ಬಾಕಿ ಇದೆ. ಕಳೆದ ಬಾರಿಯ ಫಲಿತಾಂಶ ಅತಂತ್ರವಾಗಿತ್ತು. ಹಾಗೋ ಹೀಗೋ ಮಾಡಿ ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆ ಮಾಡಿಕೊಂಡು ಆಡಳಿತ ನಡೆಸುತ್ತಿದ್ದರು. ಅದು ಆರೇ ತಿಂಗಳು. ಹದಿನೇಳು ಶಾಸಕರು ಸರ್ಕಾರದಿಂದ ಕಾಲ್ಕಿತ್ತು ಬಿಜೆಪಿ ಸೇರಿದ್ದರು. ಅದು ಆಪರೇಷನ್ ಕಮಲಕ್ಕೆ ಒಳಗಾಗಿದ್ದರು. ಈ ಬಾರಿಯೂ ಸ್ಪಷ್ಟ ಬಹುಮತ ಬರುವುದು ಅನುಮಾನ ಎನ್ನಲಾಗಿದೆ. ಬಂದರೂ ಅದು ಕಾಂಗ್ರೆಸ್ ಪರವಾದ ಅಲೆ ಎದ್ದಿದೆ.

ಈ ಮಧ್ಯೆ ಆರ್ ಅಶೋಕ್ ಒಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಲ್ಲಿ ಸಮೀಕ್ಷೆಗಳು ನೀಡಿರುವ ಹೇಳಿಕೆ ನಿಜವಾಗುತ್ತೆ ಎಂದು ಹೇಳುವ ಹಾಗಿಲ್ಲ. ಕೆಲವೊಂದು ಕಡೆ ಸತ್ಯವಾಗಿದೆ ಅಷ್ಟೆ. ಆದರೆ ನನಗೆ ಸಂಪೂರ್ಣ ನಂಬಿಕೆ ಇದೆ. ಈ ಬಾರಿ ಬಿಜೆಪಿಗೆ ಬಹುಮತ ಬರುತ್ತೆ ಅನ್ನೋದು. ಜನರಿಗೆ ಗೊತ್ತಾಗಿದೆ ಏನಾದರೂ ಆಗಲಿ ಡಬಲ್ ಇಂಜಿನ್ ಸರ್ಕಾರ ಬರಲಿ ಎಂಬುದೇ ಆಗಿದೆ. ಹೀಗಾಗಿ ಜನರು ನಿರ್ಧಾರ ಮಾಡಿದ್ದಾರೆ.

ಒಂದು ವೇಳೆ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದರೆ ಸರ್ಕಾರ ರಚನೆ ಮಾಡುವುದು ನಾವೇ. ಯಾಕಂದ್ರೆ ಕಾಂಗ್ರೆಸ್ ಗೂ ಬಹುಮತ ಸಿಗಲ್ಲ ಎಂಬುದು ಸಮೀಕ್ಷೆಯಿಂದ ಗೊತ್ತಾಗಿದೆ. ಹೀಗಾಗಿ ಸರ್ಕಾರ ರಚನೆಗೂ ಹೈಕಮಾಂಡ್ ನ ಸಹಾಯ ಬೇಕಾಗುತ್ತೆ ಎಂದಿದ್ದಾರೆ.

ನಾವೇ ಸರ್ಕಾರ ರಚನೆ ಮಾಡುವುದು, ಹೈಕಮಾಂಡ್ ಈ ಎಲ್ಲಾ ಪದಗಳು ಮತ್ತೆ ಬಿಜೆಪಿ ಏನಾದರೂ ಆಪರೇಷನ್ ಕಮಲಕ್ಕೆ ಕೈ ಹಾಕಿದೆಯಾ ಎಂಬ ಅನುಮಾನ ಹುಟ್ಟು ಹಾಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!