Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ವಿಶ್ವಮಾನವ ಶಾಲೆಯಲ್ಲಿ ಹೀರೆಹಾಳ್ ಇಬ್ರಾಹಿಂಸಾಬ್‍ರವರ ಜನ್ಮದಿನಾಚರಣೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.12) : ಪಿಂಜಾರ ಸಂಘದ ಸಂಸ್ಥಾಪಕ ಅಧ್ಯಕ್ಷ ದಿವಂಗತ ಹೆಚ್. ಹೀರೆಹಾಳ್ ಇಬ್ರಾಹಿಂಸಾಬ್‍ರವರ 92 ನೇ ಜನ್ಮದಿನಾಚರಣೆಯನ್ನು ಸೀಬಾರದಲ್ಲಿರುವ ವಿಶ್ವಮಾನವ ಶಾಲೆಯಲ್ಲಿ ಶುಕ್ರವಾರ ಆಚರಿಸಲಾಯಿತು.

ಪಿಂಜಾರ ಸಂಘದ ರಾಜ್ಯಾಧ್ಯಕ್ಷ ಹೆಚ್.ಜಲೀಲ್‍ಸಾಬ್ ಮಾತನಾಡಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದಿರುವ ಪಿಂಜಾರ/ನದಾಫ್ ಸಮಾಜ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಡಬೇಕೆಂಬ ಸಂದೇಶವನ್ನು ಹೆಚ್.ಹೀರೆಹಾಳ್ ಇಬ್ರಾಹಿಂಸಾಬ್ ನೀಡಿದ್ದರು. ಅವರ ಆಸೆಯಂತೆ ಪಿಂಜಾರ ಜನಾಂಗ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವಂತೆ ಮನವಿ ಮಾಡಿದರು.

ಪಿಂಜಾರ ನದಾಫ್ ಸಮಾಜದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಟಿ.ಶಫಿವುಲ್ಲಾ ಮಾತನಾಡುತ್ತ ಹೆಚ್.ಹೀರೆಹಾಳ್ ಇಬ್ರಾಹಿಂಸಾಬ್‍ರವರು ಪಿಂಜಾರ ಸಮುದಾಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಆಶಯದಂತೆ ಪಿಂಜಾರ ಜನಾಂಗ ಶೈಕ್ಷಣಿಕವಾಗಿ ಮುಂದೆ ಬರಬೇಕೆಂದು ಹೇಳಿದರು.

ಜೆ.ಕೆ.ಅಕ್ಬರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಆರ್.ಎಂ.ಡಿ. ಇಂಡಸ್ಟ್ರಿಸ್‍ನ್ ಹಾಜಿ ಆರ್.ದಾದಾಪೀರ್, ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಇಮಾಂಸಾಬ್, ಉಪಾಧ್ಯಕ್ಷ ಇ.ಮಹಮದ್ ಆಲಿ, ಷರೀಫಾಬಿ, ವೈ.ಹೆಚ್.ಹುಸೇನ್‍ಪೀರ್, ಸಹ ಕಾರ್ಯದರ್ಶಿ ಸಕೀನಾಬಿ, ಮುಜಾಹಿದ್ ಪಿ.ಬಿ. ಹುಸೇನ್‍ಪೀರ್, ಗೌಸ್‍ಪೀರ್, ಸಂಜುಭಾನು, ನಿವೃತ್ತ ಆರಕ್ಷಕ ಉಪ ನಿರೀಕ್ಷಕ ಟಿ.ಹುಸೇನ್‍ಪೀರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!