Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿಟಿ ರವಿಯನ್ನು ಸೋಲಿಸಿದ ಕಾಂಗ್ರೆಸ್ ಅಭ್ಯರ್ಥಿ: ಹಾಲಿನ ಅಭಿಷೇಕ ಆಗಿದ್ದು ಮಾತ್ರ ಜೆಡಿಎಸ್ ಅಭ್ಯರ್ಥಿಗೆ.. ಕಾರಣ ಏನು ಗೊತ್ತಾ..?

---Advertisement---

 

 

ಚಿಕ್ಕಮಗಳೂರು: ಬಿಜೆಪಿ ಅಭ್ಯರ್ಥಿ ಸಿಟಿ ರವಿ ಈ ಬಾರಿ ಹೀನಾಯವಾಗಿ ಸೋಲು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ತಮ್ಮಯ್ಯ ಗೆಲುವು ಕಂಡಿದ್ದಾರೆ. ಆದರೆ ಇದರ ಮಧ್ಯೆ ಜೆಡಿಎಸ್ ಅಭ್ಯರ್ಥಿಗೆ ಹಾಲಿನ ಅಭಿಷೇಕ ಮಾಡಲಾಗಿದೆ. ಅದಕ್ಕೆ ಕಾರಣವೂ ಇದೆ.

ಸಿಟಿ ರವಿಯನ್ನು ಸೋಲಿಸಲು ಕಾಂಗ್ರೆಸ್ ಅಭ್ಯರ್ಥಿಗೆ ಈ ಬಾರಿ ಬೆಂಬಲ ಜಾಸ್ತಿ ಇತ್ತು. ಜೆಡಿಎಸ್ ಎಂಎಲ್ಸಿ ಭೋಜೇಗೌಡ ಅವರು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದರು. ಬಹಿರಂಗವಾಗಿ ಪ್ರಚಾರ ಮಾಡಿದ್ದರು. ಫಲಿತಾಂಶ ಕೂಡ ಕಾಂಗ್ರೆಸ್ ಪರವೇ ಬಂದಿದೆ. ಸಿಟಿ ರವಿ ಹೀನಾಯವಾಗಿ ಸೋತಿದ್ದಾರೆ. ಹೀಗಾಗಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.

ಭೋಜೇಗೌಡ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರ ಪರಮಾಪ್ತರಾಗಿದ್ದವರು. ಕಾಂಗ್ರೆಸ್ ಜೊತೆ ಮೊದಲೇ ಒಪ್ಪಂದ ಮಾಡಿಕೊಂಡಿದ್ದರಿಂದ, ಅವರಿಗೆ ಬೆಂಬಲ ನೀಡಲಾಗಿತ್ತು. ಗೆದ್ದ ಕೂಡಲೇ ನಗರದ ಹೊಸಮನೆ ಬಡಾವಣೆಯಲ್ಲಿರುವ ಭೋಜೇಗೌಡ ಅವರಿಗೆ ಹಾಲಿನ ಅಭಿಷೇಕ ಮಾಡಿ, ಹೂವಿನ ಹಾರ ಹಾಕಿ ಸನ್ಮಾನ ಮಾಡಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment