Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

CM ರೇಸ್ ನಲ್ಲಿ ವೀರಶೈವರು ಇದ್ದಾರೆ: ಶಾಮನೂರು ಶಿವಶಂಕರಪ್ಪ ಅವರು ಖರ್ಗೆಗೆ ಬರೆದ ಪತ್ರದಲ್ಲಿ ಏನಿದೆ..?

---Advertisement---

 

ದಾವಣಗೆರೆ: ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತವೇನೋ ಬಂದಿದೆ. ಆದರೆ ಸರ್ಕಾರ ರಚನೆ ಮಾಡುವುದಕ್ಕೂ ಮುನ್ನ ಸಿಎಂ ಯಾರಾಗ್ತಾರೆ ಎಂಬ ಪ್ರಶ್ನೆ ಎದುರಾಗಿದೆ. ಅದರಲ್ಲೂ ಕಾಂಗ್ರೆಸ್ ನಲ್ಲಿಯೇ ಕಾಂಪಿಟೇಷನ್ ಶುರುವಾಗಿದೆ. ಮೊದಲಿನಿಂದಾನೂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಸಿಎಂ ಹುದ್ದೆಗೆ ಕಾಂಪಿಟೇಷನ್ ಇದೆ. ಇದರ ನಡುವೆ ಇದೀಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರವೊಂದು ಹೋಗಿದೆ. ಅದರಲ್ಲಿ ವೀರಶೈವರಿಗೆ ಸಿಎಂ ಸ್ಥಾನ ನೀಡಿ ಎಂದು ಡಿಮ್ಯಾಂಡ್ ಇಡಲಾಗಿದೆ.

ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಪತ್ರ ಬರೆದಿದ್ದು, ನಮ್ಮ ಸಮುದಾಯಕ್ಕೆ ಸಿಎಂ ಹುದ್ದೆ ನೀಡಿ. ನಿಮಗೆ ತಿಳಿದಿರುವಂತೆ ಕಾಂಗ್ರೆಸ್ ಪಕ್ಷ ಈ ಬಾರಿಯ ಚುನಾವಣೆಯಲ್ಲಿ 46 ವೀರಶೈವ ಲಿಂಗಾಯತರಿಗೆ ಟಿಕೆಟ್ ನೀಡಿತ್ತು. ಅದರಲ್ಲಿ 34 ಮಂದಿ ಗೆಲುವು ಸಾಧಿಸಿದ್ದಾರೆ. ಅಂದ್ರೆ ಶೇ. 74ರಷ್ಟು ಗೆಲುವಿನ ಅಂಕ ನಮ್ಮ ಸಮುದಾಯಕ್ಕೆ ಸಿಕ್ಕಿದೆ.

ಬಿಜೆಪಿಯ ಸಾಂಪ್ರಾದಾಯಿಕ ಮತಗಳು ಕಾಂಗ್ರೆಸ್ ಗೆ ಬಿದ್ದಿವೆ. ಈ ಬೆಂಬಲದೊಂದಿಗೆ 135 ಕ್ಷೇತ್ರಗಳು ಕಾಂಗ್ರೆಸ್ ಗೆ ಬಂದಿದೆ. ಈ ಗೆಲುವಿನ ಬಳಿಕ ಲೋಕಸಭಾ ಚುನಾವಣೆಯೂ ಬರಲಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲು ವೀರಶೈವರ ಬೆಂಬಲಬೇಕು ಎಂದು ಅವರ ಪತ್ರದಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...