Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

CET ಬರೆಯಲು ಬರುವ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಕಾರ್ಯಕ್ರಮದಿಂದ ತೊಂದರೆಯಾಗುತ್ತಾ..? ಪರಿಹಾರದ ಕ್ರಮವೇನು..?

Facebook
Twitter
Telegram
WhatsApp

ಬೆಂಗಳೂರಿನಲ್ಲಿ ನಾಳೆ ಸಿಇಟಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಜೊತೆಗೆ ನಾಳೆಯೇ ನೂತನ ಸರ್ಕಾರ ರಚನೆ ಮಾಡಲಿದ್ದು, ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಕೂಡ ಇದೆ. ಹೀಗಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಾ ಅಂತ ಶಿಕ್ಷಕರು, ಪೋಷಕರು ಆತಂಕದಲ್ಲಿದ್ದರು. ಆದರೆ ಕೆಇಎ ಯಾವುದೇ ತೊಂದರೆಯಾಗದಂತೆ ಪರಿಹಾರವನ್ನು ಕಂಡು ಕೊಂಡಿದೆ.

ಟ್ರಾಫಿಕ್ ಕಿರಿಕಿರಿಯನ್ನು‌ ತಪ್ಪಿಸಲು ವಿದ್ಯಾರ್ಥಿಗಳಿಗೆ ಬೆಳಗ್ಗೆ 8.30ಕ್ಕೆಲ್ಲಾ ಪರೀಕ್ಷಾ ಕೇಂದ್ರದಲ್ಲಿ ಇರಲು ಸೂಚನೆ ನೀಡಲಾಗಿದೆ. ಒಂದು ವೇಳೆ ಬರುವಂತ ವಿದ್ಯಾರ್ಥಿಗಳಿಗೆ ರಸ್ತೆ ಮಧ್ಯೆಯೆ ಟ್ರಾಫಿಕ್ ಸಮಸ್ಯೆಯೋ, ಮತ್ತೊಂದೋ ಎದುರಾದರೆ ಅಲ್ಲಿಯೇ‌ಇರುವ ಸಂಚಾರಿ‌ ಪೊಲೀಸರ ಸಹಾಯ ಕೇಳಲು ಸೂಚನೆ ನೀಡಲಾಗಿದೆ. ಜೊತೆಗೆ ಸಂಚಾರಿ ಪೊಲೀಸರಿಗೂ ಕೆಇಎ ಸಹಾಯದ ಮನವಿ ಮಾಡಿಕೊಂಡಿದೆ.

ಇನ್ನು ಊಟೋಪಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳಿಗೆ ಬೇರೆ ಯಾವುದೇ ತೊಂದರೆಯಾಗಬಾರದೆಂದು ಕೆಇಎ ಮತ್ತು ಸೆಂಟ್ ಜೋಸೆಫ್ ಪಿಯು ಕಾಲೇಜಿನ ಅಧಿಕಾರಿಗಳು ಊಟದ ವ್ಯವಸ್ಥೆ ಮಾಡಿದ್ದಾರೆ. ಈಗಾಗಲೇ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಮಾಹಿತಿ ಸೇರಿದಂತೆ, ಕೆಲವೊಂದು ಸೂಚನೆಗಳನ್ನು ನೀಡಲಾಗಿದೆ.

ಸಂಚಾರ ನಿಯಂತ್ರಣ ಕೋಣೆ ದೂರವಾಣಿ ಸಂಖ್ಯೆ-080-22943131 ಅಥವಾ 080-22943030 ಗೆ ಕರೆ ಮಾಡಿ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ. ಪರೀಕ್ಷೆಗೆ ಬರಲು ಸಮಸ್ಯೆಯಾದಲ್ಲಿ ಈ ನಂಬರ್ ಗೆ ಕರೆ‌ಮಾಡಿ ಸಹಾಯ ಪಡೆಯಬಹುದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!