Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಪೊಲೀಸರಿಂದ ಪಶುವೈದ್ಯಾಧಿಕಾರಿ ಬಂಧನ

---Advertisement---

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಏ.23) : ಹೊಳಲ್ಕೆರೆ ತಾಲೂಕು ಚಿಕ್ಕಜಾಜೂರು ಗ್ರಾಮದ ಪಶುವೈದ್ಯಾಧಿಕಾರಿ ಡಾ.ತಿಪ್ಪೆಸ್ವಾಮಿ ಅವರನ್ನು ಲಂಚ ಬೇಡಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಕಾಗಳಗೆರೆ ಗ್ರಾಮದ ಎಸ್.ಸ್ವಾಮಿ ಅವರ ಸಿಂಧಿ ಹಸು ಅನಾರೋಗ್ಯ ಕಾರಣ ಮರಣ ಹೊಂದಿತ್ತು. ಮೃತಪಟ್ಟ ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಪಶುವೈದ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ ರೂ.7000 ಕ್ಕೆ ಲಂಚಕ್ಕೇ ಬೇಡಿಕೆ ಇಟ್ಟಿದ್ದರು.

ಮುಂಗಡವಾಗಿ ರೂ.1000 ಗಳನ್ನು ಸಹ ಪಡೆದುಕೊಂಡಿದ್ದರು. ಲಂಚ ನೀಡಲು ಇಷ್ಟವಿರದ ಎಸ್.ಸ್ವಾಮಿ ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದರು. ಆಪಾದಿತ ಡಾ.ತಿಪ್ಪೇಸ್ವಾಮಿ ಮಂಗಳವಾರ ರೂ.6000 ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಂದ ಬಂಧಿತನಾಗಿದ್ದಾನೆ.

ಕಾಯಾಚರಣೆಯನ್ನು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ ಅವರ ನೇತೃತ್ವದಲ್ಲಿ, ಪೊಲೀಸ್ ನಿರೀಕ್ಷಕಿ ಬಿ.ಕೆ.ಲತಾ ಅವರ ತಂಡ ಕೈಗೊಂಡಿದೆ.

ಈ ಸಂದರ್ಭದಲ್ಲಿ ಪೊಲೀಸ್ ಉಪಾಧೀಕ್ಷಕ ಎನ್.ಮೃತ್ಯುಂಜಯ, ವೈ.ಎಸ್.ಶಿಲ್ಪಾ, ಆರ್.ವಸಂತ ಕುಮಾರ್, ಪೊಲೀಸ್ ಸಿಬ್ಬಂದಿ ಜಿ.ಎಂ.ತಿಪ್ಪೇಸ್ವಾಮಿ, ಹೆಚ್.ಶ್ರೀನಿವಾಸ, ಎಸ್.ಆರ್.ಪುಷ್ಪ, ಎಲ್.ಜಿ.ಸತೀಶ, ಜಿ.ಎನ್.ಸಂತೋಷ ಕುಮಾರ್, ಎಂ.ವೀರೇಶ್, ಆರ್.ವೆಂಕಟೇಶ್‌ಕುಮಾರ್, ಟಿ.ವಿ.ಸಂತೋಷ, ಡಿ.ಮಾರುತಿ, ಎನ್.ಎಲ್.ಶ್ರೀಪತಿ ಸೇರಿದಂತೆ ಮತ್ತಿತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...