Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಮೇ 26 ರಂದು ಉಚಿತ ಆರೋಗ್ಯ ಶಿಬಿರ : ಯಾವೆಲ್ಲಾ ಕಾಯಿಲೆಗಳಿಗೆ ಉಚಿತ ತಪಾಸಣೆ ? ಇಲ್ಲಿದೆ ಮಾಹಿತಿ…

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 87220 22817

ಚಿತ್ರದುರ್ಗ,(ಮೇ. 24) :  ಚಿತ್ರದುರ್ಗ ರೋಟರಿ ಕ್ಲಬ್ ಮತ್ತು ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ಮೇ. 26ರ ಶುಕ್ರವಾರದಂದು ನಗರದ ಎಸ್.ಆರ್.ಬಿ.ಎಂ.ಎಸ್. ರೋಟರಿಬಾಲಭವನದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಂಡಿರುವುದಾಗಿ ಸಪ್ತಗಿರಿ ಆಸ್ಪತ್ರೆಯ ಶಿಬಿರದ ಸಂಚಾಲಕರಾದ ರಾಘವೇಂದ್ರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಈ ಶಿಬಿರದಲ್ಲಿ ಹೃದಯರೋಗ, ನರರೋಗ, ಕ್ಯಾನ್ಸರ್, ಮೂತ್ರಪಿಂಡದ ಕಲ್ಲು ಕಾಯಿಲೆಗೆ ಸಂಬಂಧಿಸಿದಂತೆ ತಪಾಸಣೆಯನ್ನು ಮಾಡಲಾಗುವುದು.

ಇದರಲ್ಲಿ ಶಸ್ತ್ರಚಿಕಿತ್ಸೆ ಅಗತ್ಯವಿದ್ದವರಿಗೆ ಉಚಿತವಾಗಿ ಅವರನ್ನು ಕರೆದುಕೊಂಡು ಹೋಗಿ ಸಪ್ತಗಿರಿ ಆಸ್ಪತ್ರೆಯಲ್ಲಿ ಮಾಡಿಸಲಾಗುವುದು. ಇದರ ಜೊತೆಯಲ್ಲಿ ಉಚಿತವಾಗಿ ಇಸಿಜಿ,/2ಡಿ, ಎಕೋ ಸ್ಕ್ಯಾನಿಂಗ್ ಮಾಡಲಾಗುವುದು ಎಂದರು.

ಈ ಶಿಬಿರದಲ್ಲಿ ಭಾಗವಹಿಸಿ ಶಸ್ತ್ರ ಚಿಕಿತ್ಸೆಗೆ ಅರ್ಹರಾದವರು ಬಿಪಿಎಲ್ ಕಾರ್ಡ್ ಸೇರಿದಂತೆ ಇತರೆ ಕಾರ್ಡನ್ನು ಹೊಂದಿದ್ದರೆ ಉಚಿತವಾಗಿ ಚಿಕಿತ್ಸೆಯನ್ನು ನಡೆಸಲಾಗುವುದು ಇಲ್ಲದವರಿಗೂ ಸಹಾ ನಮ್ಮ ಟ್ರಸ್ಟ್ ವತಿಯಿಂದ ಉಚಿತವಾಗಿ ಶಸ್ತ್ರ ಚಿಕಿತ್ಸೆಯನ್ನು ನಡೆಸಲಾಗುವುದು. ಅಂದು ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೂ ತಪಾಸಣೆಯನ್ನು ಮಾಡಲಾಗುವುದು. ನಮ್ಮ ಆಸ್ಪತ್ರೆಯಿಂದ 7 ಜನ ತಜ್ಞ ವೈದ್ಯರು ಆಗಮಿಸಲಿದ್ದಾರೆ ಎಂದರು.

ಗೋಷ್ಟಿಯಲ್ಲಿ ಭಾಗವಹಿಸಿದ್ದ ರೋಟರಿ ಕ್ಲಬ್‌ನ ನಿಯೋಜಿತ ಅಧ್ಯಕ್ಷರಾದ ಕನಕರಾಜು ಮಾತನಾಡಿ ರೋಟರಿ ಕ್ಲಬ್‌ವತಿಯಿಂದ ಈ ರೀತಿಯ ವಿವಿಧ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳುವುದರ ಮೂಲಕ ಜನತೆಯ ಆರೋಗ್ಯವನ್ನು ಕಾಪಾಡಲಾಗುತ್ತದೆ, ಇದರೊಂದಿಗೆ ಶಾಲಾ ಮಕ್ಕಳಿಗೆ ಅಗತ್ಯವಾಗಿ ಬೇಕಾದ ಸಾಮಾಗ್ರಿಗಳನ್ನು ನೀಡುವುದರೊಂದಿಗೆ ಅವರ ಶಿಕ್ಷಣಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಾಣ ಮಾಡಲಾಗುತ್ತಿದೆ.

ಅಪೌಷ್ಟಿಕತೆಯ ಮಕ್ಕಳನ್ನು ಗುರುತಿಸಿ ಅವರಿಗೆ ಪೌಷ್ಟಿಕತೆಯನ್ನು ನೀಡುವ ವಿವಿಧ ರೀತಿಯ ವಸ್ತುಗಳನ್ನು ನೀಡುವುದರೊಂದಿಗೆ ದೇಶಕ್ಕೆ ಉತ್ತಮ ಪ್ರಜೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನಿಡುವ ಕಾರ್ಯವನ್ನು ರೋಟರಿ ಕ್ಲಬ್ ಮಾಡುತ್ತಿದೆ ಎಂದರು.

ಗೋಷ್ಟಿಯಲ್ಲಿ ರೋಟರಿ ಕ್ಲಬ್‌ನ ಕಾರ್ಯದರ್ಶಿ ರೋ. ಜಯಶ್ರೀ ಷಾ. ರೋ.ವಿಕ್ರಾಂತ್ ಜೈನ್ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Vastu Tips : ಮನೆಯಲ್ಲಿ ಗಡಿಯಾರವನ್ನು ಯಾವ ದಿಕ್ಕಿಗೆ ಇಟ್ಟರೆ ಒಳ್ಳೆಯದು ಗೊತ್ತಾ ?

ಸುದ್ದಿಒನ್ : ವಾಸ್ತು ಎಂದರೆ ಮನೆಗೆ ಮಾತ್ರವಲ್ಲದೇ ಮನೆಯಲ್ಲಿ ಇರುವ  ವಸ್ತುಗಳಿಗೂ ಕೂಡ ಅನ್ವಯಿಸುತ್ತದೆ.  ವಸ್ತುಗಳನ್ನು ಇರಿಸುವ ದಿಕ್ಕನ್ನು ಅವಲಂಬಿಸಿ, ಮನೆಗೆ ನಷ್ಟ ಮತ್ತು ಲಾಭವನ್ನು ಅಂದಾಜಿಸುತ್ತಾರೆ. ವಾಸ್ತು ಪ್ರಕಾರ, ಅನೇಕ ರೀತಿಯ ವಸ್ತುಗಳನ್ನು

ದಿನಕ್ಕೆ 2 ಬಾರಿ ಈ ಪಾನೀಯವನ್ನು ಕುಡಿದರೆ ಕೊಬ್ಬು ಬೆಣ್ಣೆಯಂತೆ ಕರಗುತ್ತದೆ…!

ಸುದ್ದಿಒನ್ : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಧಿಕ ದೇಹದ ತೂಕದ ಬಗ್ಗೆ ಚಿಂತಿಸುತ್ತಿದ್ದಾರೆ. ತೂಕವು ನಿಯಂತ್ರಣದಲ್ಲಿದ್ದರೂ, ಜನರು ಸಾಮಾನ್ಯವಾಗಿ ಬೊಜ್ಜಿನ ಬಗ್ಗೆ ಚಿಂತಿಸುತ್ತಾರೆ. ಅಧಿಕ ತೂಕ ಅಥವಾ ಸ್ಥೂಲಕಾಯತೆಯು ಅಸಹ್ಯವಾಗಿ ಕಾಣುವುದಲ್ಲದೆ, ನಡೆಯಲು ಕಷ್ಟವಾಗುತ್ತದೆ.

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….

ಈ ರಾಶಿಯವರಿಗೆ ಗುಡ್ ಲಕ್ ಗಳ ಸುರಿಮಳೆ….   ಬುಧವಾರ ರಾಶಿ ಭವಿಷ್ಯ -ಮೇ-8,2024 ಸೂರ್ಯೋದಯ: 05:50, ಸೂರ್ಯಾಸ್ತ : 06:34 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079, ಚೈತ್ರಮಾಸ,

error: Content is protected !!