Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮುರುಘಾಮಠದ ಪರಂಪರೆಯ ಉಳಿವಿಗಾಗಿ ನೂತನ ಶಾಸಕ ಕೆ.ಸಿ.ವೀರೇಂದ್ರ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಿ : ಹೆಚ್.ಎಂ.ಮಂಜುನಾಥ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಮೇ.25) : ಮುರುಘಾಮಠದ ಪರಂಪರೆಯ ಉಳಿವಿಗಾಗಿ ವೀರಶೈವ ಲಿಂಗಾಯಿತ ಯುವ ವೇದಿಕೆ ಹೋರಾಟ ಮಾಡಿಕೊಂಡು ಬರುತ್ತಿದ್ದು, ನೂತನ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ನೇತೃತ್ವದಲ್ಲಿ ಸಭೆ ಕರೆದು ಸಮಿತಿಗಳನ್ನು ರಚಿಸಲಿ ಎಂದು ವೀರಶೈವ ಲಿಂಗಾಯಿತ ಯುವ ವೇದಿಕೆ ಜಿಲ್ಲಾಧ್ಯಕ್ಷ ಹೆಚ್.ಎಂ.ಮಂಜುನಾಥ್ ಮನವಿ ಮಾಡಿದರು.

ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುರುಘಾಮಠದ ಡಾ.ಶಿವಮೂರ್ತಿ ಶರಣರ ಅಧಿಕಾರವಧಿಯನ್ನು ಜಿಲ್ಲಾ ನ್ಯಾಯಲಯ ಮೊಟಕುಗೊಳಿಸಿದ್ದು, ಉಚ್ಚ ನ್ಯಾಯಾಲಯ ಸದರಿ ಪ್ರಕರಣವನ್ನು ವಜಾಗೊಳಿಸಿದೆ. ಮುರುಘಾಮಠಕ್ಕೆ ಸರ್ಕಾರ ನೇಮಕ ಮಾಡಿದ್ದ ಆಡಳಿತಾಧಿಕಾರಿಯನ್ನು ವಜಾ ಮಾಡಿದ್ದು, ವೀರಶೈವ ಸಮಾಜ, ಮಠದ ಭಕ್ತರು ಹಾಗೂ ಇತರೆ ಸಮಾಜದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಾಲ್ಕು ವಾರಗಳಲ್ಲಿ ಆಡಳಿತ ಸಮಿತಿಯನ್ನು ರಚಿಸಿ ನ್ಯಾಯಾಲಯಕ್ಕೆ ವರದಿ ನೀಡಲು ಆದೇಶಿಸಿರುವುದರಿಂದ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಸಭೆ ಕರೆದು ಸಮಿತಿ ರಚಿಸಲಿ ಎಂದು ಹೆಚ್.ಎಂ.ಮಂಜುನಾಥ್ ವಿನಂತಿಸಿದರು.

ವೀರಶೈವ ಲಿಂಗಾಯಿತ ಯುವ ವೇದಿಕೆ ಗೌರವಾಧ್ಯಕ್ಷ ಕೆ.ಸಿ.ಗಂಗಾಧರ್, ಜಿಲ್ಲಾ ಉಪಾಧ್ಯಕ್ಷ ಗಿರೀಶ್ ಎಂ.ಎಸ್. ಕಾರ್ಯದರ್ಶಿ ಸಿ.ಬಿ.ನಾಗರಾಜ್, ತಾಲ್ಲೂಕು ಅಧ್ಯಕ್ಷ ಪ್ರಶಾಂತ್‍ರೆಡ್ಡಿ ಹೆಚ್. ನಗರಾಧ್ಯಕ್ಷ ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

ಬೆಳಗಾವಿಯಲ್ಲಿ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ ವಿಮಾನಕ್ಕೆ ನಿರಾಕರಣೆ..!

ಬೆಳಗಾವಿ: ರಾಜ್ಯದ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಳಗಾವಿಯಲ್ಲಿದ್ದು, ಬಳಿಕ ಅಲ್ಲಿಂದ ಶಿರಸಿಗೆ ತೆರಳಲಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಜನರನ್ನುದ್ದೇಶಿಸಿ

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ

error: Content is protected !!