Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರ್‌ಎಸ್‌ಎಸ್ ಸಂಸ್ಥಾಪನಾ ದಿನಕ್ಕೆ ಬಿಎಸ್‌ವೈ ಶುಭಾಶಯ

Facebook
Twitter
Telegram
WhatsApp

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಲ್ಲಾ ಸ್ವಯಂಸೇವಕರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪನಾ ದಿನದ ಶುಭಾಶಯಗಳನ್ನು ಕೋರಿದ್ದಾರೆ.

ರಾಷ್ಟ್ರನಿಷ್ಠೆ, ದೇಶ ಸೇವೆಯ ಪರಮ ಧ್ಯೇಯದೊಂದಿಗೆ ಸಮಾಜದ ವಿವಿಧ ಸ್ತರಗಳಲ್ಲಿ ರಾಷ್ಟ್ರ ನಿರ್ಮಾಣ ಕಾರ್ಯಕ್ಕೆ ಪೂರಕವಾಗಿ ನಿರಂತರ ಕಾರ್ಯನಿರ್ವಹಿಸುತ್ತಿರುವ ಸಂಘದ ಎಲ್ಲಾ ಸ್ವಯಂಸೇವಕರಿಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪನಾ ದಿನದ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.

ವಿಜಯದಶಮಿಯಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಚಾಲಕ ಡಾ.ಮೋಹನ್ ಭಾಗವತ್ ಇಂದು ಬೆಳಿಗ್ಗೆ 7:30ಕ್ಕೆ ಭಾಷಣ ಮಾಡಿದರು. ಸರ್ಕಾರಿ ನಿವಾಸ ಕಾವೇರಿಯಲ್ಲಿ ವರ್ಚುವಲ್ ಮೂಲಕ ರಾಷ್ಟ್ರವನ್ನುದ್ದೇಶಿಸಿ ಭಾಗವತ್ ನೀಡಿದ ಸಂದೇಶವನ್ನು ಬಿಎಸ್​ವೈ ವೀಕ್ಷಿಸಿದರು.

ನಾಡಿನ ಎಲ್ಲರಿಗೂ ವಿಜಯದಶಮಿ ಹಬ್ಬದ ಹೃದಯಪೂರ್ವಕ ಶುಭಕಾಮನೆಗಳು. ಒಳ್ಳೆಯತನಕ್ಕೆ ಸದಾ ಗೆಲುವು ಎನ್ನುವುದನ್ನು ಸಂಕೇತಿಸುವ ವಿಜಯದಶಮಿ, ನಾಡಿನಲ್ಲಿ ಸದಾ ಒಳಿತಾಗುವಂತೆ ಹರಸಲಿ. ಎಲ್ಲರ ನೋವು, ದುಃಖ, ಸಂಕಷ್ಟಗಳನ್ನು ಪರಿಹರಿಸಿ ಜಗನ್ಮಾತೆ ಎಲ್ಲರಿಗೂ ಭಾಗ್ಯ ಕರುಣಿಸಲಿ. ಕೊರೊನಾ ವಿರುದ್ಧದ ನಮ್ಮ ಹೋರಾಟದಲ್ಲಿ ವಿಜಯವನ್ನು ಅನುಗ್ರಹಿಸಲಿ ಎಂದು ಬಿಎಸ್​ವೈ ಟ್ವೀಟ್ ಮಾಡಿದ್ದಾರೆ.

ಧೀಮಂತ ಸಾಧಕ, ದೇಶದ ಅಭ್ಯುದಯಕ್ಕಾಗಿ ತಮ್ಮ ಜೀವನವನ್ನೇ ಸಮರ್ಪಿಸಿದ ಆದರ್ಶ ನೇತಾರ, ಭಾರತದ ಮಿಸೈಲ್ ಮ್ಯಾನ್, ಮಾಜಿ ರಾಷ್ಟ್ರಪತಿ, ಭಾರತರತ್ನ ದಿವಂಗತ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮಜಯಂತಿಯಂದು ಅವರಿಗೆ ಗೌರವಪೂರ್ವಕ ನಮನಗಳನ್ನು ಸಲ್ಲಿಸೋಣ. ಅವರ ಜೀವನ, ಸಾಧನೆ ಮತ್ತು ಚಿಂತನೆಗಳು ಸದಾ ಸ್ಫೂರ್ತಿದಾಯಕ ಎಂದು ಕಲಾಂ ಸ್ಮರಣೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!