ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ: ರಾಜ್ಯದಲ್ಲಿ ಕಳೆದ ಕೆಲದಿನಗಳಿಂದ ಮಳೆರಾಯನ ಆರ್ಭಟ ಜೋರಾಗಿದೆ. ಇದರಿಂದ ಸಾಕಷ್ಟು ಅನಾಹುತಗಳು ಸಂಭವಿಸಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಸಾಕಷ್ಡು ರೈತರು ನಷ್ಟಕ್ಕೆ ಒಳಗಾಗಿದ್ದಾರೆ.
ಭರಮಸಾಗರ ಹೋಬಳಿಯ ಬಸ್ತಿಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನದಿಂದ ಮಳೆಯಾಗುತ್ತಿದೆ. ಆಲಿಕಲ್ಲು ಸಹಿತ ಮಳೆಯಾಗಿದ್ದು, ಇದರಿಂದಾಗಿ 20 ಕ್ಕೂಹೆಚ್ಚು ರೈತರು ಕಣ್ಣೀರು ಹಾಕಿದ್ದಾರೆ. ರೈತರ ಬೆಳೆ ನೆಲಕಚ್ಚಿದೆ.
ರಸ್ತೆಗಳಲ್ಲಿ ನೀರು ನಿಂತಿದೆ. ಸ್ಟೇಡಿಯಂ ರಸ್ತೆಯಲ್ಲಿ ಮರಗಳು ಉರುಳಿವೆ. ವಿದ್ಯುತ್ ಸಂಚಾರ ಸ್ಥಗಿತಗೊಂಡಿದೆ. ಕೋಟೆನಾಡು ಜಿಲ್ಲೆಯಲ್ಲಿ ಮಳೆಯಿಂದಾಗಿ ಸಮಸ್ಯೆ ಶುರುವಾಗಿದೆ. ಇನ್ನು ಚಿತ್ರದುರ್ಗ ಮಾತ್ರವಲ್ಲ ಚಿಕ್ಕಮಗಳೂರು, ಬಾಗಲಕೋಟೆಯಲ್ಲೂ ಮಳೆ ಅವಾಂತರ ಸೃಷ್ಟಿಸಿದೆ.
ಚಿಕ್ಕಮಗಳೂರಿನಲ್ಲಿ ಈಗಾಗಲೇ ಹೈ ಅಲರ್ಟ್ ಘೋಷಣೆ ಮಾಡಿದ್ದಾರೆ. 47 ಗ್ರಾಮ ಪಂಚಾಯತಿ ವ್ಯಾಪ್ತಿಯ 77 ಗ್ರಾಮಗಳನ್ನು ಅಪಾಯದ ಗ್ರಾಮಗಳೆಂದು ಗುರುತಿಸಲಾಗಿದೆ. ಕೊಡಗು ಜಿಲ್ಲೆಯೂ ಆರಂಭದ ಮಳೆಗೇನೆ ತತ್ತರಿಸಿ ಹೋಗಿದೆ. ಯಾಕಂದ್ರೆ ಈಗಾಗಲೇ ಕೊಡಗಿನಲ್ಲಿ ಮಳೆಯಿಂದಾಗಿಯೇ ಪ್ರವಾಹ ಉಂಟಾಗಿತ್ತು. ಎಷ್ಟೋ ಜನ ಮನೆ ಮಠಗಳನ್ನು ಕಳೆದುಕೊಂಡು, ಈಗ ಸರ್ಕಾರ ನೀಡಿದ ಮನೆಗಳಲ್ಲಿ ವಾಸಮಾಡುತ್ತಿದ್ದಾರೆ. ಹೀಗಾಗಿ ಆರಂಭದ ಮಳೆಯೇ ಎಲ್ಲೆಡೆ ಅವಾಂತರ ಸೃಷ್ಟಿ ಮಾಡಿದ್ದು, ಆತಂಕಕ್ಕೆ ಕಾರಣವಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್