Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಪ್ರವೀಣ್ ನೆಟ್ಟಾರು ಪತ್ನಿ ನೂತನ್ ಕುಮಾರಿ ಕೆಲಸ ಕಳೆದುಕೊಂಡ ಬಗ್ಗೆ ಡಿಸಿ ಹೇಳಿದ್ದೇನು..?

---Advertisement---

 

ಕಾಂಗ್ರೆಸ್ ಪಕ್ಷ ಸರ್ಕಾರ ರಚನೆ ಮಾಡಿದ್ದು, ಅಧಿಕಾರವಹಿಸಿಕೊಂಡ ಮೇಲೆ ಈ ಹಿಂದೆ ಇದ್ದ ಬಿಜೆಪಿ ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ. ಬಿಜೆಪಿ ಆಡಳಿತಾವಧಿಯಲ್ಲಿ ನೇಮಿಸಿದ್ದ ತಾತ್ಕಾಲಿಕ ಹುದ್ದೆಗಳನ್ನು ರದ್ದು ಮಾಡಲಾಗಿದೆ. ಹೀಗಾಗಿ ಸಿಂಪತಿ ಮೇಲೆ ಕೆಲಸ ಪಡೆದುಕೊಂಡಿದ್ದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕೂಡ ಕೆಲಸ ಕಳೆದುಕೊಂಡಿದ್ದಾರೆ.

ಈ ಸಂಬಂಧ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಮಾತನಾಡಿ, ಸರ್ಕಾರ ಬದಲಾದಾಗ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಾಮಾನ್ಯಾವಾಗಿ ರದ್ದಾಗುತ್ತವೆ. ಕೆಲಸದಿಂದ ಬಿಡುಗಡೆ ಮಾಡುವ ವಿಚಾರವನ್ನು ನಾವೂ ಈಗಾಗಲೇ ನೂತನ ಕುಮಾರಿ ಅವರಿಗೆ ತಿಳಿಸಿದ್ದೇವೆ. ನಮ್ಮನ್ನು ಕೆಲಸದಿಂದ ಮುಂದುವರೆಸಿ ಎಂದು ಆಕೆ ಏನಾದರೂ ಡಿಸಿ ಕಚೇರಿಗೆ ಅರ್ಜಿ ಸಲ್ಲಿಸಿದರೆ ನಾವೂ ಅದನ್ನು ಸರ್ಕಾರದ ಗಮನಕ್ಕೆ ತರುತ್ತೇವೆ ಎಂದಿದ್ದಾರೆ.

ಇನ್ನು ನೂತನ ಅವರ ಕೆಲಸ ಹೋಗಿದ್ದಕ್ಕೆ ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರ ಮೇಲೆ ಹರಿಹಾಯ್ದಿದ್ದಾರೆ. ಇದಕ್ಕೆ ಕಾಂಗ್ರೆಸ್ ನಾಯಕರು ಕೂಡ ಸರಿಯಾದ ರೀತಿಯಲ್ಲಿಯೇ ಟಾಂಗ್ ನೀಡಿದ್ದಾರೆ. ಭ್ರಷ್ಟಾಚಾರವೇ ಕುಲದೈವ ಎಂದು ನಂಬಿರುವ ಬಿಜೆಪಿಗೆ ನೀತಿ ಮತ್ತು ನಿಯಮವನ್ನು ಅಧ್ಯಯನ ಮಾಡಲು ಸಮಯವಿರಲು ಸಾಧ್ಯವೆ..? ನಿಯಮದ ಪ್ರಕಾರ ಸರ್ಕಾರ ಬದಲಾದಾಗ ತಾತ್ಕಾಲಿಕ ಹುದ್ದೆಗಳಹ ರದ್ದಾಗುತ್ತವೆ. ಬದುಕಿಗೆ ಶಾಶ್ವತ ಪರಿಹಾರ ತೋರಿಸದೆ, ಇಂತಹ ಪೇಪರ್ ಚಾಕ್ಲೇಟ್ ನೀಡುವ ಮೂಲಕ ಪ್ರವೀಣ್ ನೆಟ್ಟಾರು ಹೆಂಡತಿಗೆ ಬಿಜೆಪಿ ಮೋಸ ಮಾಡಿದೆ ಎಂದು ತಿರುಗೇಟು ನೀಡಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...