Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಘಾತಕಾರಿ ಘಟನೆ :  ಯುವಕನೊಬ್ಬ ವೃದ್ಧೆಯನ್ನು ಕೊಂದು ಶವವನ್ನು ತಿಂದ

---Advertisement---

ಯುವಕನೊಬ್ಬ ವೃದ್ಧೆಯೊಬ್ಬಳನ್ನು ಕೊಂದು ಮಾಂಸ ತಿಂದಿರುವ ಭೀಕರ ಘಟನೆ ರಾಜಸ್ಥಾನದಲ್ಲಿ ಬೆಳಕಿಗೆ ಬಂದಿದೆ.  ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪಾಲಿ ಜಿಲ್ಲೆಯಲ್ಲಿ ನಡೆದ ಈ ಘಟನೆಯ ಕುರಿತು ಬಂಗರ್ ಆಸ್ಪತ್ರೆಯ ವೈದ್ಯರ ವರದಿಯ ಪ್ರಕಾರ, ಮುಂಬೈನ ಸುರೇಂದ್ರ ಠಾಕೂರ್ ಎಂಬ 24 ವರ್ಷದ ಹುಡುಗ ‘ಹೈಡ್ರೋಫೋಬಿಯಾ’ದಿಂದ ಬಳಲುತ್ತಿದ್ದಾನೆ.
ಈ ಹಿಂದೆ ಆತನಿಗೆ ಯಾವಾಗಲಾದರೂ ಹುಚ್ಚು ನಾಯಿ ಕಚ್ಚಿರಬಹುದು, ಆದರೆ ಆ ಸಮಯದಲ್ಲಿ ಸೂಕ್ತ ಚಿಕಿತ್ಸೆ ದೊರೆಯದ ಕಾರಣ ಈ ರೀತಿ ಆಗಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.

ಸೇಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಶಾರಧನ ಗ್ರಾಮದ ಶಾಂತಿದೇವಿ (65) ಶುಕ್ರವಾರ ಕೊಲೆಯಾದವರು. ಆಕೆಯು ದನ ಮೇಯಿಸಲು ಗ್ರಾಮದ ಹೊರವಲಯಕ್ಕೆ ಹೋದಾಗ ಆ ಯುವಕ ವೃದ್ಧೆಯನ್ನು ಕಲ್ಲಿನಿಂದ ಹೊಡೆದು ಕೊಂದಿದ್ದಾನೆ. ಮಾನಸಿಕ ರೋಗಿಯಂತೆ ವರ್ತಿಸುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವೃದ್ಧೆಯ ಮಗ ಬಿರಾನ್, ಕ್ಯಾಥೋಟ್ ಪೊಲೀಸರಿಗೆ ದೂರು ನೀಡಿದ್ದಾನೆ. ಮೇಕೆ ಮೇಯಿಸಿಕೊಂಡು ಹಿಂತಿರುಗುತ್ತಿದ್ದಾಗ ವ್ಯಕ್ತಿಯೊಬ್ಬ ಸತ್ತ ಮಹಿಳೆಯ ಮಾಂಸ ತಿನ್ನುತ್ತಿರುವುದನ್ನು ಕಂಡು ದೂರು ನೀಡಿದ್ದಾನೆ.

ಅವರ ದೂರಿನ ಆಧಾರದ ಮೇಲೆ ಪೊಲೀಸರು ಠಾಕೂರ್ ವಿರುದ್ಧ ಕೊಲೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮೊದಲಿಗೆ ಆರೋಪಿಯನ್ನು ಕಂಡು ಹೆದರಿದ ಸ್ಥಳೀಯರು ಪರಾರಿಯಾಗಲು ಯತ್ನಿಸಿದರಾದರೂ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಹೈಡ್ರೋಫೋಬಿಯಾದಿಂದ ಬಳಲುತ್ತಿರುವ ರೋಗಿಯನ್ನು ಬಂಗರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿಂದೆ ಹುಚ್ಚು ನಾಯಿ ಕಚ್ಚಿರಬಹುದು. ಆ ಸಂದರ್ಭದಲ್ಲಿ ಅವರಿಗೆ ಲಸಿಕೆ ಹಾಕಿಸದೇ ಇರುವುದರಿಂದ‌ ಅವರಿಗೆ ಹೈಡ್ರೋಫೋಬಿಯಾ ಅಥವಾ ರೇಬೀಸ್ ಬಂದಿರಬಹುದು ಎಂದು
ಡಾ.ಪ್ರವೀಣ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...