Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಂಬರೀಶ್ ಪುತ್ರನ ಮದುವೆ ಬೆಂಗಳೂರಲ್ಲಿ ನಡೆದರೂ.. ಬೀಗರೂಟ ಮಂಡ್ಯದಲ್ಲಿ ನಡೆಯಲಿದೆ..!

---Advertisement---

ಹೇಳಿ ಕೇಳಿ ಅಂಬರೀಶ್ ಅವರು ಹುಟ್ಟಿ ಬೆಳೆದ ಊರು ಮಂಡ್ಯ ಜಿಲ್ಲೆ. ಅಂಬರೀಶ್ ಮೇಲಿನ ಅಭಿಮಾನದಿಂದ ಮಂಡ್ಯದ ಜನತೆ ಸುಮಲತಾ ಅವರ ಕೈಹಿಡಿದಿದ್ದಾರೆ. ಸಂಸದೆಯನ್ನಾಗಿ ಆಯ್ಕೆ ಮಾಡಿದ್ದಾರೆ. ಇದೀಗ ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಸುಮಲತಾ ಅವರ ಏಕೈಕ ಪುತ್ರ ಅಭಿಷೇಕ್ ಅಂಬರೀಶ್ ಮದುವೆ ನಡೆಯುತ್ತಿದೆ, ಮಂಡ್ಯದಲ್ಲಿಯೇ ಬೀಗರ ಊಟ ನೆರವೇರಲಿದೆ.

ಸೆಲೆಬ್ರೆಟಿಗಳ ಫೇಮಸ್ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ್ಪ ಅವರ ಮಗಳು ಅವಿವಾ ಬಿಡಪ್ಪ ಮತಚತು ಅಭಿಷೇಕ್ ಅಂಬರೀಶ್ ಜೂನ್ 5ರಂದು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ‌. ಅರಮನೆ ಮೈದಾನದಲ್ಲಿ ಮದುವೆ ನಡೆಯಲಿದೆ. ಜೂನ್ 7ರಂದು ಅದ್ದೂರಿಯಾಗಿ ಆರತಕ್ಷತೆ ನಡೆಯಲಿದೆ. ಆದರೆ ಜೂನ್ 17ಕ್ಕೆ ಮಂಡ್ಯದಲ್ಲಿ ಬೀಗರ ಔತಣಕೂಟ ನಡೆಯಲಿದೆ. ಎಲ್ಲಾ ಅಭಿಮಾನಿಗಳಿಗೆ ಆಹ್ವಾನ ನೀಡಲಾಗಿದೆ. ನವದಂಪತಿಯನ್ನು ಕಣ್ತುಂಬಿಕೊಂಡು, ಬೀಗರ ಔತಣಕೂಟ ಸವಿದು, ಹಾರೈಸಲು ಹೋಗಬಹುದು.

ಇನ್ನು ಅವಿವಾ ಬಿಡಪ ಅವರನ್ನು ಅಭಿಷೇಕ್ ಅಂಬರೀಶ್ ಅವರು ಒಂದು ಫ್ಯಾಷನ್ ಶೋ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು.4-5 ವರ್ಷ ಡೇಟಿಂಗ್ ನಲ್ಲಿದ್ದ ಜೋಡಿ ಇತ್ತಿಚೆಗೆ ನಿಶ್ಚಿತಾರ್ಥ ಮಾಡಿಕೊಂಡು, ಈಗ ಮದುವೆಯಾಗುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...