Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹ್ಯಾಪಿ ಬರ್ತ್ ಡೇ ಮೈ ಅಂಬಿ : ಬಾಲ್ಯದ ಫೋಟೋ ಹಾಕಿ ವಿಶ್ ಮಾಡಿದ ಸುಮಲತಾ

Facebook
Twitter
Telegram
WhatsApp

 

ಇಂದು ರೆಬೆಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ. 71ನೇ ವರ್ಷದ ಹುಟ್ಟುಹಬ್ಬವಿಂದು. ಅಭಿಮಾನಿಗಳು, ಸೆಲೆಬ್ರೆಟಿಗಳು, ರಾಜಕಾರಣಿಗಳು ಅಂಬರೀಶ್ ಅವರನ್ನು ಈ ದಿನ ನೆನೆಯುತ್ತಿದ್ದಾರೆ. ಅವರ ಹುಟ್ಟುಹಬ್ಬಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಶುಭಕೋರುವ ಮೂಲಕ ನೆನಪಿಸಿಕೊಳ್ಳುತ್ತಿದ್ದಾರೆ.

ನಟಿ, ಸಂಸದೆ ಸುಮಲತಾ ಕೂಡ ತಮ್ಮ ಪತಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಪ್ರತಿ ಹುಟ್ಟುಹಬ್ಬ, ವಾರ್ಷಿಕೋತ್ಸವಕ್ಕೆಲ್ಲಾ ಸುಮಲತಾ ಸ್ಪೆಷಲ್ ಆಗಿಯೇ ವಿಶ್ ಮಾಡುತ್ತಾರೆ. ಇವತ್ತು ಕೂಡ ಅಷ್ಟೇ ಸ್ಪೆಷಲ್ ಆಗಿ, ಅಂಬರೀಶ್ ಅವರ ಬಾಲ್ಯ ನೆನಪುಗಳನ್ನು ತಂದು ವಿಶ್ ಮಾಡಿದ್ದಾರೆ.

“ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ.
ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು.
ಹಾಗಾಗಿ ನಿಮ್ಮ ಹುಟ್ಟು ಹಬ್ಬ ಅದೊಂದು ಸಡಗರವಾಗಿರುತ್ತಿತ್ತು.
ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬ. ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟು ಹಬ್ಬವನ್ನೂ ಅಭಿಮಾನಿಗಳ ಜೊತೆಯಾಗಿ ಮತ್ತಷ್ಟು ಅದ್ಧೂರಿಯಾಗಿ ಆಚರಿಸುತ್ತಿದ್ದೆವು.
ಮನೆ ಮುಂದೆ ಜನಸಾಗರ, ನಿಮ್ಮ ಆರ್ಭಟ, ಹಾಸ್ಯ ಪ್ರಜ್ಞೆಯ ಮಾತು, ರಾತ್ರಿ ಇಡೀ ಕಾಯುತ್ತಾ ನಿಂತಿದ್ದ ಅಭಿಮಾನಿಗಳ ಘೋಷಣೆ ಇನ್ನೂ ಹಾಗೆಯೇ ಇದೆ. ಇವತ್ತೂ ಕೂಡ ಅವೆಲ್ಲವೂ ನಿಮಗೆ ಶುಭಾಶಯ ಹೇಳುತ್ತಿವೆ. ಸ್ವೀಕರಿಸಿ.

ಹ್ಯಾಪಿ ಬರ್ತಡೇ ಮೈ ಅಂಬಿ. ಜತೆಗಿರದ ಜೀವ ಎಂದೆಂದಿಗೂ ಜೀವಂತ” ಎಂದು ಬರೆದುಕೊಂಡು ವಿಡಿಯೋ ಶೇರ್ ಮಾಡಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‍ರವರನ್ನು ಗೆಲ್ಲಿಸಿ : ಮಯೂರ್ ಜೈಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 17  : ವಿಧಾನಪರಿಷತ್‍ನಲ್ಲಿ ಬಹುಮತ ಬೇಕಾಗಿರುವುದರಿಂದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

error: Content is protected !!