Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

IPL 2023 : ರೋಚಕ ಪಂದ್ಯದಲ್ಲಿ ಗೆದ್ದು ಐದನೇ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡ ಚೆನ್ನೈ ಸೂಪರ್ ಕಿಂಗ್ಸ್

Facebook
Twitter
Telegram
WhatsApp

ಸುದ್ದಿಒನ್ ಡೆಸ್ಕ್

 

ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್ 2023 ರ ವಿಜೇತರಾಗಿ ಹೊರಹೊಮ್ಮಿದರು. ಬಹುತೇಕ ಸೋಲಿನ ಅಂಚಿನಲ್ಲಿದ್ದ ಚೆನ್ನೈ ತಂಡವನ್ನು ಅಂತಿಮವಾಗಿ ರವೀಂದ್ರ ಜಡೇಜಾ ಗೆಲುವಿನ ದಡ ಸೇರಿಸಿದರು.ಕೊನೆಯ ಓವರ್ ಬೌಲ್ ಮಾಡಿದ ಮೋಹಿತ್ ಶರ್ಮಾ ಮೊದಲ ನಾಲ್ಕು ಎಸೆತಗಳನ್ನು ಮಿತವಾಗಿ ಬೌಲ್ ಮಾಡಿದರಾದರೂ ಕೊನೆಯ ಎರಡು ಎಸೆತಗಳನ್ನು ಎಸೆಯುವ ವೇಳೆ ನಿಯಂತ್ರಣ ಕಳೆದುಕೊಂಡರು. ಇದರೊಂದಿಗೆ ಕೊನೆಯ ಎರಡು ಬಾಲ್ ಗಳಿಗೆ ಜಡೇಜಾ ಸತತ 6 ಮತ್ತು 4 ರನ್ ಗಳಿಸಿ ಚೆನ್ನೈಗೆ  ಐದನೇ ಬಾರಿಗೆ ಪ್ರಶಸ್ತಿ  ತಂದುಕೊಡುವಲ್ಲಿ ಯಶಸ್ವಿಯಾದರು.

 

ಮುಖ್ಯಾಂಶಗಳು:

• ಚೆನ್ನೈ ಐಪಿಎಲ್ 2023 ರ ವಿಜೇತ ತಂಡ

• ಕೊನೆಯ ಓವರ್‌ನಲ್ಲಿ  ಮ್ಯಾಜಿಕ್ ಮಾಡಿದ ಜಡೇಜಾ

• ಮಳೆಯಿಂದಾಗಿ ಪಂದ್ಯವನ್ನು 15 ಓವರ್‌ಗಳಿಗೆ ಮೊಟಕು.

• ಚೆನ್ನೈ ಐದನೇ ಬಾರಿಗೆ ಐಪಿಎಲ್ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ 2023 ರ ವಿಜೇತರಾದರು. ಐಪಿಎಲ್ 2023 ರ ಫೈನಲ್ ಪಂದ್ಯದಲ್ಲಿ ಸೋಮವಾರ ಗುಜರಾತ್ ಟೈಟಾನ್ಸ್ ವಿರುದ್ಧ ರೋಚಕ ಪಂದ್ಯದಲ್ಲಿ ಕೊನೆಯ ಎಸೆತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್‌ಗಳಿಂದ ಜಯಗಳಿಸಿತು.

ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ತಂಡ 214 ರನ್ ಗಳಿಸಿತು.ಚೆನ್ನೈ ತಂಡ ಕೊನೆಯ ಎಸೆತದಲ್ಲಿ ಐದು ವಿಕೆಟ್ ನಷ್ಟಕ್ಕೆ 171 ರನ್‌ಗಳ ಗುರಿಯನ್ನು ತಲುಪಿತು. ಚೆನ್ನೈ ಗೆಲುವಿಗೆ ಕೊನೆಯ 6 ಎಸೆತಗಳಲ್ಲಿ 13 ರನ್‌ಗಳ ಅಗತ್ಯವಿತ್ತು. ಈ ಹಂತದಲ್ಲಿ ಕೊನೆಯ ಓವರ್ ಬೌಲ್ ಮಾಡಿದ ಮೋಹಿತ್ ಶರ್ಮಾ ಮೊದಲ 4 ಎಸೆತಗಳಲ್ಲಿ ಕೇವಲ ಮೂರು ರನ್‌ಗಳನ್ನು ನೀಡಿ ಪಂದ್ಯದ ರೋಚಕತೆಯನ್ನು ತುತ್ತ ತುದಿಗೆ ಕೊಂಡೊಯ್ದರು. ಆದರೆ ಕೊನೆಯ ಎರಡು ಬಾಲ್ ಗಳಲ್ಲಿ ರವೀಂದ್ರ ಜಡೇಜಾ ಅವರು ಕ್ರಮವಾಗಿ 6 ಮತ್ತು 4 ರನ್ ಪಡೆಯುವ ಮೂಲಕ ಪಂದ್ಯದ ಚಿತ್ರಣವೇ ಬದಲಾಗಿ ಚೆನ್ನೈ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು.

ಈ ಪಂದ್ಯವನ್ನು ಗೆಲ್ಲುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಇದುವರೆಗೆ ಮುಂಬೈ ಇಂಡಿಯನ್ಸ್ ಮಾತ್ರ ಐದು ಬಾರಿ ಪ್ರಶಸ್ತಿ ಗೆದ್ದಿದೆ. ಮತ್ತೊಂದೆಡೆ, ಗುಜರಾತ್ ಟೈಟಾನ್ಸ್ ಸತತ ಎರಡನೇ ಬಾರಿಗೆ ಫೈನಲ್ ತಲುಪಿದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!