Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

2024 ರ ಚುನಾವಣೆಯಲ್ಲಿ ವಿಪಕ್ಷಗಳದ್ದೇ ಗೆಲುವು : ರಾಹುಲ್ ಗಾಂಧಿ

Facebook
Twitter
Telegram
WhatsApp

 

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಿಪಕ್ಷಗಳು ಒಗ್ಗೂಡಿ ಬಿಜೆಪಿಯನ್ನು ಸೋಲಿಸಲಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದರು.

ಸದ್ಯ ಅಮೆರಿಕ ಪ್ರವಾಸದಲ್ಲಿರುವ ಅವರು ವಾಷಿಂಗ್ಟನ್ ನ ನ್ಯಾಷನಲ್ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆ ಚೆನ್ನಾಗಿರುತ್ತದೆ. ಜನರಲ್ಲಿ ಅಚ್ಚರಿ ಮೂಡಿಸುತ್ತದೆ ಎಂಬ ಭಾವನೆ ನನಗಿದೆ.  ಬರೀ ಸಂಖ್ಯಾಬಲವಲ್ಲ ವಿರೋಧ ಪಕ್ಷಗಳು ಒಂದಾಗಿ ಬಿಜೆಪಿಯನ್ನು ಸೋಲಿಸುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ. ಒಂದು ವರ್ಷದೊಳಗೆ ಲೋಕಸಭೆ ಚುನಾವಣೆ ನಡೆಯಲಿದ್ದು, ಮೈತ್ರಿ ಮಾಡಿಕೊಳ್ಳಲು ವಿರೋಧ ಪಕ್ಷಗಳೊಂದಿಗೆ ಕಾಂಗ್ರೆಸ್ ಸಮಾಲೋಚನೆ ನಡೆಸುತ್ತಿದೆ.

ವಿಪಕ್ಷಗಳ ನಡುವೆ ಒಗ್ಗಟ್ಟು ಮೂಡುತ್ತಿದ್ದು,  ಎಲ್ಲ ಪ್ರತಿಪಕ್ಷಗಳೊಂದಿಗೆ (ಪಕ್ಷಗಳ) ಚರ್ಚೆ ನಡೆಸುತ್ತಿದ್ದೇವೆ. ಈ ವಿಚಾರದಲ್ಲಿ ಉತ್ತಮ ಬೆಳವಣಿಗೆ ಕಂಡುಬರುತ್ತಿದೆ. ಪ್ರತಿಪಕ್ಷಗಳ ನಡುವಿನ ಪೈಪೋಟಿ ಮತ್ತು ಅಂತರ ಇರುವುದರಿಂದ, ಏನೇ ವ್ಯತ್ಯಾಸಗಳು ಬಂದರೂ ಬಿಜೆಪಿ ಯನ್ನು ಎದುರಿಸಲು ನಮ್ಮ ನಮ್ಮಲ್ಲಿಯೇ ಒಂದಿಷ್ಟು ರಾಜಿ ಮಾಡಿಕೊಳ್ಳಬೇಕು. ಇದೇ ವೇಳೆ ಕೇಂದ್ರದ ಬಿಜೆಪಿ ಸರ್ಕಾರವನ್ನು ರಾಹುಲ್ ಗಾಂಧಿ ಟೀಕಿಸಿದರು. ವಿರೋಧ ಪಕ್ಷದ ನಾಯಕರುಗಳ ಮೇಲೆ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ದ್ವೇಷ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

ಮಾನನಷ್ಟ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ನಂತರ ಸಂಸತ್ತಿನ ಸದಸ್ಯತ್ವವನ್ನು ಕಳೆದುಕೊಂಡಿರುವ ಬಗ್ಗೆಯೂ ರಾಹುಲ್ ಮಾತನಾಡಿದರು. ಅದರಿಂದ ನನಗೆ ಒಳ್ಳೆಯದೇ ಆಯಿತು ಎಂದು ಹೇಳಿದರು. ಹೀಗೆ ನಾನು ಅನರ್ಹನಾಗುತ್ತೇನೆಂದು  ಎಂದಿಗೂ ನಿರೀಕ್ಷಿಸಿರಲಿಲ್ಲ ಮತ್ತು ಅವರು ಈ ರೀತಿ ಮಾಡುತ್ತಾರೆ ಎಂದು ನಾನು ಎಂದಿಗೂ ಯೋಚಿಸಲಿಲ್ಲ ಎಂದು ಹೇಳಿದರು. ಆದರೆ, ಇದರಿಂದ ಒಳ್ಳೆಯದಾಯಿತು. ಈ ಮೂಲಕ ಜನಸೇವೆ ಮಾಡುವ ದೊಡ್ಡ ಅವಕಾಶ ಸಿಕ್ಕಿದೆ ಎಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

error: Content is protected !!