Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಟ್ರೈನ್ ದುರಂತದಲ್ಲಿ ಸಾವನ್ನಪ್ಪಿದ್ದು ಬರೋಬ್ಬರಿ 233 ಮಂದಿ : ಸಾವು ಹೆಚ್ಚಾಗುವ ಆತಂಕ..!

---Advertisement---

ನಿನ್ನೆ ರಾತ್ರಿ ನಡೆದ ರೈಲು ದುರಂತ ಎಲ್ಲರನ್ನು ಶಾಕ್ ಗೆ ಒಳಗಾಗಿಸಿದೆ. ದೇಶದಲ್ಲಿಯೇ ಇಂಥ ಘೋರ ರೈಲು ದುರಂತ ಇದೆ ಮೊದಲಾಗಿದೆ. ಎರಡು ಪ್ಯಾಸೆಂಜರ್ ಮತ್ತು ಒಂದು ಗೂಡ್ಸ್ ರೈಲು ಡಿಕ್ಕಿಯಾದ ಪರಿಣಾಮ ಬರೋಬ್ಬರಿ 233 ಜನ ಅಸುನೀಗಿದ್ದಾರೆ. 900 ಮಂದಿ ಗಾಯಗೊಂಡಿದ್ದಾರೆ. ಇನ್ನು ಕೂಡ ಜನರ ನರಳಾಟ ಜಾಸ್ತಿಯಾಗಿಯೇ ಇದೆ.

ಗಾಯಗೊಂಡವರಿಗೆ ಅಲ್ಲಿನ ಸ್ಥಳೀಯರೇ ರಕ್ತದಾನ ಮಾಡಿ ಕಾಪಾಡಿದ್ದಾರೆ. ಶಾಲಿಮಾರ್ – ಚೆನ್ನೈ ಕೊರೋಮಂಡಲ್ ಟ್ರೈನ್ ಮುಖಾಮುಖಿಯಾಗಿ ಈ ದುರ್ಘಟನೆ ಸಂಭವಿಸಿದೆ. ಟ್ರೈನ್ ಚಲಿಸುತ್ತಿದ್ದ ಬೋಗಿ ಬಿಟ್ಟು ಮತ್ತೊಂದು ಬೋಗಿಗೆ ಹೋಗಿ ಬಿದ್ದಿದ್ದವು. 10-12 ಕೋಚ್ ಗಳು ಹಳಿ ತಪ್ಪಿದ್ದವು. ಇದೆ ವೇಳೆ ಅದೇ ಟ್ರ್ಯಾಕ್ ನಲ್ಲಿ ಬೆಂಗಳೂರು – ಹೌರಾ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಬಂದು ಹಳಿ ಮೇಲೆ ಬಿದ್ದಿದ್ದ ಬೋಗಿಗಳಿಗೆ ಹೊಡೆದಿದೆ. ಇದರಿಂದ ಗೂಡ್ಸ್ ರೈಲು ಕೂಡ ಅಪಘಾತಕ್ಕೀಡಾಗಿದೆ.

NDRF ನ ಮೂರು ತಂಡಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿವೆ. ಅಷ್ಟೇ ಅಲ್ಲ ಒರಿಸ್ಸಾದ ಡಿಸಾಸ್ಟರ್ ರ್ಯಾಪಿಡ್ ಆಕ್ಷನ್ ಫೋರ್ಸ್ ತಂಡ ಕೂಡ ಕಾರ್ಯಾಚರಣೆಯಲ್ಲಿ ತೊಡಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಒಡಿಶಾದ ಜನ ಸಹಾಯಕ್ಕೆ ಧಾವಿಸಿದ್ದಾರೆ. ರಕ್ತದಾನ ಮಾಡಲು ಮುಂದಾಗಿದ್ದಾರೆ. ಸ್ಥಳೀಯರ ಮಾನವೀಯತೆ ಕಂಡು ಅಲ್ಲಿನ ವೈದ್ಯರು ಧನ್ಯವಾದ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...