Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಮಾಬಾಯಿ ಅಂಬೇಡ್ಕರ್ ನಗರ ನಾಮಫಲಕ ಉದ್ಘಾಟನೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, (ಅ.15) : ಇಲ್ಲಿನ ಸರ್ಕಾರಿ ಕಲಾ ಕಾಲೇಜು ಹಿಂಭಾಗ ಯಂಗಮ್ಮನಕಟ್ಟೆ ಹತ್ತಿರವಿರುವ ಪೌರಸೇವಾ ಕಾರ್ಮಿಕರ ವಸತಿ ನಿಲಯದ ರಸ್ತೆಯಲ್ಲಿ ಗುರುವಾರ ರಮಾಬಾಯಿ ಅಂಬೇಡ್ಕರ್ ನಗರ ನಾಮಫಲಕ ಉದ್ಘಾಟಿಸಲಾಯಿತು.

ರೇಷ್ಮೆ ಇಲಾಖೆ ನಿವೃತ್ತ ನೌಕರ ಕೃಷ್ಣಮೂರ್ತಿ ನಾಮಫಲಕ ಉದ್ಘಾಟಿಸಿ ಮಾತನಾಡುತ್ತ ಪೌರ ಕಾರ್ಮಿಕರ ವಸತಿ ನಿಲಯದ ರಸ್ತೆಗೆ ರಮಾಬಾಯಿ ಅಂಬೇಡ್ಕರ್ ನಗರ ಎಂಬ ಹೆಸರಿಟ್ಟಿರುವುದು ಅರ್ಥಪೂರ್ಣವಾಗಿದೆ. ಇಲ್ಲಿ ಪೌರ ಕಾರ್ಮಿಕರೆ ಹೆಚ್ಚಾಗಿ ವಾಸಿಸುತ್ತಿದ್ದು, ಅಂಬೇಡ್ಕರ್‍ರವರ ಸ್ಮರಣೆಯಾಗಬೇಕು ಎಂದು ಹೇಳಿದರು.

ಸಾಮಾಜಿಕ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಕೆ.ಕುಮಾರ್ ಮಾತನಾಡಿ ಕಳೆದ ಇಪ್ಪತ್ತು ವರ್ಷಗಳ ಹಿಂದೆ ನಗರಸಭೆಯಿಂದ ಪೌರ ಕಾರ್ಮಿಕರಿಗೆ ಇಲ್ಲಿ ನಿವೇಶನಗಳನ್ನು ನೀಡಲಾಗಿತ್ತು. ಅದರಲ್ಲಿ ಕೆಲವರು ತಮ್ಮ ನಿವೇಶನಗಳನ್ನು ಮಾರಾಟ ಮಾಡಿಕೊಂಡಿದ್ದಾರೆ. ಖರೀದಿಸಿರುವವರು ಈಗಾಗಲೇ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದರೆ ಇನ್ನು ಕೆಲವು ಖಾಲಿ ನಿವೇಶನಗಳಿವೆ. ಮುಂದಿನ ದಿನಗಳಲ್ಲಿ ಪೌರ ಕಾರ್ಮಿಕರ ಮಕ್ಕಳ ಮೂಲಕ ನ್ಯಾಯಾಲಯದ ಮೊರೆ ಹೋಗಿ ನಿವೇಶನಗಳನ್ನು ವಾಪಸ್ ಪಡೆಯಲಾಗುವುದು ಎಂದು ತಿಳಿಸಿದರು.

ಸಾಮಾಜಿಕ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಪ್ರೊ.ಸಿ.ಕೆ.ಮಹೇಶ್, ಪೌರ ಕಾರ್ಮಿಕ ಎಂ.ಮಲ್ಲಿಕಾರ್ಜುನ್, ಶ್ರೀನಿವಾಸ್, ಬಿ.ಮಲ್ಲಿಕಾರ್ಜುನ್, ಟಿ.ರಾಮು, ಶಿವಣ್ಣ ಕಸವನಹಳ್ಳಿ ಚಿಕ್ಕಣ್ಣ, ಬಿ.ಪಿ.ತಿಪ್ಪೇಸ್ವಾಮಿ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!