Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ರಘುಮೂರ್ತಿ ಭೇಟಿ ;  ಶೀಘ್ರ ಪರಿಹಾರದ ಭರವಸೆ

Facebook
Twitter
Telegram
WhatsApp

ಸುದ್ದಿಒನ್, ಚಳ್ಳಕೆರೆ, (ಅ.15): ನಗರದ ಗಾಂಧಿನಗರ, ಅಂಬೇಡ್ಕರ್ ನಗರ, ರಹೀಂ ನಗರ, ಚಿತ್ರಯ್ಯನಹಟ್ಟಿಯಲ್ಲಿ ಮಳೆಯಿಂದ ಹಾನಿಯಾದ ಮನೆಗಳನ್ನು ಶುಕ್ರವಾರ ಶಾಸಕ ಟಿ.ರಘುಮೂರ್ತಿ ವೀಕ್ಷಣೆ ಮಾಡಿ, ಪರಿಹಾರ ಕೊಡಿಸುವುದಾಗಿ ಸಂತ್ರಸ್ಥರಿಗೆ ಸಂತ್ವಾನ ಹೇಳಿದ ಅವರು ಮಳೆಯಿಂದ ಹಾನಿಗೊಳಗಾದ ಮನೆಗಳ ವರದಿಯನ್ನು ಸರ್ಕಾರಕ್ಕೆ ಶೀಘ್ರವೇ ಸಲ್ಲಿಸಿ ಸಂತ್ರಸ್ಥರಿಗೆ ಪರಿಹಾರ ದೊರಕಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ನಗರದಲ್ಲಿ ಮಳೆಯಿಂದ ಹಲವು ಮನೆಗಳು ಕುಸಿದಿವೆ, ಮಣ್ಣಿನ ಮನೆಗಳ ಹೆಚ್ಚಿನದಾಗಿ ಬಿದ್ದಿವೆ, ಇನ್ನು ಬೀಳು ಅಂತದಲ್ಲಿರುವ ಮನೆಗಳನ್ನು ಗುರಿತಿಸಬೇಕು, ಮಳೆ ಬಂದಾಗ ಆ ಮನೆಗಳು ಕುಸಿದು ಬಿದ್ದು ಅಪಾಯವಾಗುವುದನ್ನು ತಪ್ಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ರಾಜಕಾಲುವೆಗಳಲ್ಲಿ ನೀರು ಸರಗವಾಗಿ ಹರಿಯುವಂತೆ ರಾಜ ಕಾಲುವೆಯಲ್ಲಿ ಬೆಳಿದಿರುವ ಸೀಮೆಜಾಲಿ ಗಿಡಗಳನ್ನು ಸ್ವಚ್ಚ ಮಾಡಬೇಕು. ಕಾಲುವೆಯಲ್ಲಿ ಉಳೆತ್ತುವ ಕೆಲಸವಾಗಬೇಕು, ರಾಜ ಕಾಲುವೆಗಳನ್ನು ಉಳೆತ್ತದೆ ಇರುವುದರಿಂದ ಮಳೆ ಹೆಚ್ಚಿನದಾಗಿ ಸುರಿದಾಗ ರಾಜಕಾಲುವೆ ಕಾಲುವೆ ತುಂಬಿ ಮನೆಗಳಿಗೆ ನೀರು ನುಗ್ಗುತ್ತದೆ. ಆದಷ್ಟು ಕಾಲುವೆಗಳನ್ನು ಆಗಾಗ ಸ್ವಚ್ಚಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಬೇಕು ಎಂದರು.

ಈ ವೇಳೆ ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮಿ,  ಸ್ಥಾಯಿಸಮಿತಿ ಅಧ್ಯಕ್ಷ ರಮೇಶ್ ಗೌಡ, ತಹಶೀಲ್ದಾರ್ ಎನ್. ರಘುಮೂರ್ತಿ, ಪೌರಾಯುಕ್ತ ಪಾಲಯ್ಯ, ಸದಸ್ಯರಾದ ಸುಜಾತ ಪಾಲಯ್ಯ, ಕವಿತಾ, ನಗರಸಭೆ ಮಾಜಿ ಸದಸ್ಯ ಪ್ರಸನ್ನಕುಮಾರ್, ಮುಖಂಡರಾದ ಬೋರಯ್ಯ, ಪಾಲಯ್ಯ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

ಹೊಸದುರ್ಗ | ಕೃಷಿ‌ ಮಾರುಕಟ್ಟೆಯಲ್ಲಿ ಡಿ. ಗ್ರೂಪ್ ನೌಕರ ಆತ್ಮಹತ್ಯೆ..!

ಸುದ್ದಿಒನ್, ಹೊಸದುರ್ಗ, ಮೇ. 20 : ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇದನ್ನು ಕಂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ.

error: Content is protected !!