Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಳಲ್ಕೆರೆಯಲ್ಲಿ ದಲಿತ ಸಮುದಾಯದ ಮುಖಂಡರಿಂದ ಶಾಸಕ ಎಂ.ಚಂದ್ರಪ್ಪಗೆ ಮುತ್ತಿಗೆ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ಪಾಂಡುರಂಗಪ್ಪ, ಹೊಳಲ್ಕೆರೆ,
9986343484

ಹೊಳಲ್ಕೆರೆ, (ಜೂ. 04) : ಒಳಮೀಸಲು ನೀತಿ ಜಾರಿಗೆ ಮುಂದಾಗಿದ್ದೇ ಬಿಜೆಪಿ ಸೋಲಿಗೆ ಕಾರಣವೆಂದು ಹೇಳುವ ಮೂಲಕ ಜಾತಿ-ಜಾತಿಗಳ ಮಧ್ಯೆ ಗಲಾಟೆ ಉಂಟು ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರಿಗೆ ಮಾದಿಗ ಸಮುದಾಯದ ನೂರಾರು ಮುಖಂಡರು ದಿಗ್ಬಂಧನ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರವಾಸಿಮಂದಿರದ ಬಳಿ ಭಾನುವಾರ ಜಮಾಯಿಸಿದ ಮಾದಿಗ ಹಾಗೂ ದಲಿತ ಸಂಘರ್ಷ ಸಮಿತಿಯ ನೂರಾರು ಮುಖಂಡರು, ಚಂದ್ರಪ್ಪ ಅವರಿದ್ದ ಕಾರಿಗೆ ಕೆಲಕಾಲ ದಿಗ್ಬಂಧನ ಹಾಕಿ ದಿಕ್ಕಾರ ಕೂಗಿದರು.

ಯಾವುದೇ ಪಕ್ಷ ಚುನಾವಣೆಯಲ್ಲಿ ಸೋಲಲು ವಿವಿಧ ಕಾರಣಗಳು ಇರುತ್ತವೆ. ಆದರೆ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಮಾತ್ರ, ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಮಾದಿಗ ಸಮುದಾಯದ ರಾಜ್ಯದ ಪ್ರಭಾವಿ ನಾಯಕರಾದ ಎ.ನಾರಾಯಣಸ್ವಾಮಿ, ಗೋವಿಂದ ಕಾರಜೋಳ ಹಾಗೂ ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಅವರೇ ಮುಖ್ಯ ಕಾರಣ ಎಂದು ಹೇಳಿಕೆ ನೀಡಿರುವುದು ಅತ್ಯಂತ ನೋವಿನ ವಿಷಯ ಎಂದು ಬೇಸರಿಸಿದರು.

ಚುನಾವಣೆಗೆ ಮುನ್ನ ಈ ರೀತಿ ಹೇಳಿಕೆ ನೀಡಿದ್ದರೆ ಚಂದ್ರಪ್ಪ ಸೋಲು ಖಚಿತವಾಗುತ್ತಿತ್ತು. ಆದರೆ ಚುನಾವಣೆ ಮುಗಿದ ಬಳಿಕ ಈ ರೀತಿ ಹೇಳಿಕೆ ನೀಡಿ ಕ್ಷೇತ್ರದಲ್ಲಿ ಸಹೋದರರ ರೀತಿ ಜೀವನ ನಡೆಸುತ್ತಿರುವ ಮಾದಿಗ, ಭೋವಿ, ಲಂಬಾಣಿ, ಕೊರಚ ಇತರೆ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಕೆಲಸಕ್ಕೆ ಕೈ ಹಾಕಿದ್ದಾರೆ. ಈ ಮೂಲಕ ಕ್ಷೇತ್ರದಲ್ಲಿ ಗಲಭೆ ಹುಟ್ಟಿ ಹಾಕಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಆರು ತಿಂಗಳ ಹಿಂದೆ ತನ್ನ ಬೆಂಬಲಿಗನ ಮೂಲಕ ವೀರಶೈವ ಲಿಂಗಾಯತ ಮುಖಂಡನ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದು, ಅಶಕ್ತ ಮಹಿಳೆಯೊಬ್ಬರ ಆಸ್ತಿಯನ್ನು ತನ್ನ ಕುಟುಂಬದ ಹೆಸರಿಗೆ ಅಕ್ರಮವಾಗಿ ನೋಂದಣಿ ಮಾಡಿಸಿಕೊಂಡು, ಕ್ಷೇತ್ರದಲ್ಲಿ ಸರ್ವಾಧಿಕಾರಿ ರೀತಿ ವರ್ತಿಸುತ್ತಿರುವ ಚಂದ್ರಪ್ಪ, ಈಗ ಜಾತಿ ಗಲಭೆ ಹುಟ್ಟುಹಾಕಲು ಮುಂದಾಗಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ವರಿಷ್ಢರು ಹಾಗೂ ಸಂಘಪರಿವಾರದ ನಿರ್ಧಾರದಂತೆ ಮುಖ್ಯಮಂತ್ರಿ ಆಗಿದ್ದ ಬಸವರಾಜ್ ಬೊಮ್ಮಾಯಿ ಒಳಮೀಸಲು ಜಾರಿಗಾಗಿ ಕೇಂದ್ರಕ್ಕೆ ಶಿಫಾರಸು ಮಾಡಿದರು. ಈ ಸಂದರ್ಭ ಸಂಪುಟದಲ್ಲಿದ್ದ ಭೋವಿ, ಲಂಬಾಣಿ ಸಮುದಾಯದವರು ಕೂಡ ಒಪ್ಪಿಗೆ ನೀಡಿದ್ದಾರೆ. ಜೊತೆಗೆ ಆ ಸಂದರ್ಭ ಬಾಯಿಮುಚ್ಚಿಕೊಂಡಿದ್ದ ಚಂದ್ರಪ್ಪ, ಈ ಚುನಾವಣೆಯಲ್ಲಿ ಅಲ್ಪಮತಗಳ ಅಂತರದಲ್ಲಷ್ಟೇ ಗೆದ್ದಿದ್ದೇನೆ ಎಂಬುದನ್ನು ಮರೆತು ಈಗ ಬಿಜೆಪಿ ಸೋಲಿಗೆ ಮಾದಿಗ ಸಮುದಾಯದ ಬಿಜೆಪಿ ಮುಖಂಡರೇ ಕಾರಣ ಎಂದು ಟೀಕೆ ಮಾಡುತ್ತಿರುವುದು ಪಕ್ಷ ವಿರೋಧಿ ಚಟುವಟಿಕೆ ಜೊತೆಗೆ, ರಾಜ್ಯದಲ್ಲಿ ಬಹುಸಂಖ್ಯೆಯಲ್ಲಿರುವ ಮಾದಿಗ ಸಮುದಾಯಕ್ಕೆ ಉದ್ದೇಶಪೂರ್ವಕವಾಗಿ ಅವಮಾನ ಮಾಡುಂತಹದ್ದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೊತೆಗೆ ಕ್ಷೇತ್ರದಲ್ಲಿ ತನಗೆ ಮತ ಹಾಕದ ಲಂಬಾಣಿ ಸಮುದಾಯದ ಮೇಲೆ ಪರೋಕ್ಷವಾಗಿ ದ್ವೇಷ ತೀರಿಸಿಕೊಳ್ಳುವ ಹೇಳಿಕೆ ಚಂದ್ರಪ್ಪ ನೀಡಿದ್ದಾರೆ. ಆದ್ದರಿಂದ ಸಮುದಾಯಗಳ ವಿರುದ್ಧ ವಿಷಕಾರುತ್ತಿರುವ ಚಂದ್ರಪ್ಪನನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಬೇಕು. ಇಲ್ಲದಿದ್ದರೇ ಬಿಜೆಪಿ ವಿರುದ್ಧ ರಾಜ್ಯಾದ್ಯಂತ ಜನಜಾಗೃತಿ ಮೂಡಿಸಲಾಗುವುದು ಎಂದು ಎಚ್ಚರಿಸಿದರು.

ಹೊಳಲ್ಕೆರೆ ಕ್ಷೇತ್ರದ ಮಾದಿಗರ ಹಟ್ಟಿಯಲ್ಲೂ ಚಂದ್ರಪ್ಪ ಅವರಿಗೆ ಮತ ಹಾಕಲಾಗಿದೆ. ಕೆಲ ಜಾತಿ ಮುಖಂಡರಿಗೆ ಹಣದ ಆಮಿಷ ತೋರಿಸಿ ಮತ ಪಡೆದಿರುವ ಚಂದ್ರಪ್ಪ ಈಗ ಅದೇ ಸಮುದಾಯದ ನಾಯಕರಾದ ನಾರಾಯಣಸ್ವಾಮಿ, ಗೋವಿಂದ ಕಾರಜೋಳ ವಿರುದ್ಧ ಹೇಳಿಕೆ ಜೊತೆಗೆ ಅಂದಿನ ಮುಖ್ಯಮಂತ್ರಿ ಬಸರಾಜ ಬೊಮ್ಮಾಯಿ ಹಾಗೂ ಪಕ್ಷದ ವರಿಷ್ಠರ ನಿರ್ಧಾರವನ್ನೇ ಚಂದ್ರಪ್ಪ ವಿರೋಧಿಸಿ ಹೇಳಿಕೆ ನೀಡುತ್ತಿದ್ದಾರೆ.
ಜಾತಿಗಳ ಮಧ್ಯೆ ದ್ವೇಷ ಬಿತ್ತುವ ಇಂತಹ ಶಾಸಕನನ್ನು ಕೂಡಲೇ ಪಕ್ಷದಿಂದ ಉಚ್ಛಾಟಿಸಬೇಕು ಹಾಗೂ ಜಾತಿ ಗಲಭೆಗೆ ಪ್ರಚೋದನೆ ನೀಡುತ್ತಿರುವ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಬೇಕು ಎಂದು ಆಗ್ರಹಿಸಿದರು.

ತಕ್ಷಣ ಪೊಲೀಸರು ಮಧ್ಯ ಪ್ರವೇಶಿಸಿ ಶಾಸಕರಿದ್ದ ಕಾರು ಪ್ರವಾಸಿಮಂದಿರದಿಂದ ಹೊರಡಲು ಅವಕಾಶ ಕಲ್ಪಿಸಿಕೊಟ್ಟು ಪರಿಸ್ಥಿತಿ ತಿಳಿಗೊಳಿಸಿದರು.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಪಾಂಡುರಂಗಸ್ವಾಮಿ, ಮಾದಿಗ ಸಮುದಾಯದ ಮುಖಂಡರಾದ ಕೆಂಗುಂಟೆ ಜಯ್ಯಪ್ಪ, ಬಂಜಗೊಂಡನಹಳ್ಳಿ ಜಯಣ್ಣ,  ಮದ್ದೇರು ಕುಬೇರಪ್ಪ, ಚಿಕ್ಕಜಾಜೂರು ಸೋಮಣ್ಣ ಮುಂತಾದರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!