ಎಷ್ಟು ಜನರನ್ನು ಜೈಲಿಗೆ ಹಾಕ್ತೀರಿ.. ಎಮರ್ಜೆನ್ಸಿ ಶೀಘ್ರದಲ್ಲಿಯೇ ಬರಬಹುದೇನೋ : ಬೊಮ್ಮಾಯಿ

suddionenews
1 Min Read

 

ಬೆಳಗಾವಿ: ಆಡಳಿತ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ರೊಚ್ಚಿಗೆದ್ದಿದ್ದಾರೆ. ಆಕ್ರೋಶ ಹೊರಹಾಕಿದ್ದಾರೆ. ಈ ಸರ್ಕಾರಕ್ಕೆ ಅಧಿಕಾರದ ಅಮಲು ಬಂದಿದೆ. ಕರ್ನಾಟಕದಲ್ಲಿ ಅತಿ ಶೀಘ್ರದಲ್ಲಿಯೇ ಎಮರ್ಜೆನ್ಸಿ ಘೋಷಣೆಯಾಗುತ್ತದೆಯೋ ಏನೋ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕಿಡಿಕಾರಿದ್ದಾರೆ.

ಗೋಹತ್ಯೆ ನಿಷೇಧ ಕಾಯ್ದೆ, ಪಠ್ಯ ಪುಸ್ತಕ ಪರಿಷ್ಕರಣೆ, ಸರ್ಕಾರದ ವಿರುದ್ಧ ಮಾತನಾಡಿದರೆ ಜೈಲಿಗೆ ಹಾಕ್ತೀವಿ ಅಂತಾರೆ ಎಂಬ ಹೇಳಿಕೆಗೆ ಮಾತನಾಡಿದ ಅವರು, ಕೆಲ ಸಚಿವರ ಹೇಳಿಕೆಗಳನ್ನು ನೋಡಿದ್ರೆ ವಾಕ್ ಸ್ವಾತಂತ್ರ್ಯ ಮೊಟಕುಗೊಳಿಸುತ್ತಿದ್ದಾರೆ. ನಮ್ಮ ಅಭಿಪ್ರಾಯಕ್ಕೆ ಸಹಮತ ಇಲ್ಲದವರ ಧ್ವನಿ ಹತ್ತಿಕ್ಕುವ ಪ್ರವೃತ್ತಿ ನಡೆಸುತ್ತಿದ್ದಾರೆ.

ಅತೀ ಶೀಘ್ರದಲ್ಲಿಯೇ ಕರ್ನಾಟಕದಲ್ಲಿ ಎಮರ್ಜೆನ್ಸಿ ಬರುತ್ತದೋ ಏನೋ. ಅಧಿಕಾರಿಗಳಿಗೆ ಒಬ್ಬ ಮಂತ್ರಿ ಹೇಳಿದ್ದಾರೆ. ಕೆಲಸ‌ ಮಾಡದಿದ್ದರೆ ಚಾಕುವಿನಿಂದ ಹೊಡೆಯುತ್ತೇವೆಂದು. ಜನರು ನಿಮಗೆ ಅಧಿಕಾರ ಕೊಟ್ಟಿರುವುದು ಜನರ ಸೇವೆ ಮಾಡಲೆಂದು, ರಾಜ್ಯದ ಅಭಿವೃದ್ಧಿಗೆ, ಜನರ ಸೇವೆ ಮಾಡಲೆಂದು, ಆದರೆ ಈ ರೀತಿಯ ಅಧಿಕಾರ ದುರುಪಯೋಗ ಪಡಿಸಿಕೊಳ್ಳಲೆಂದು ನಿಮಗೆ ಅಧಿಕಾರ ನೀಡಿಲ್ಲ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *