ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ತಾನೂ ನೀಡಿದ ಗ್ಯಾರಂಟಿಗಳನ್ನು ಚಾಲ್ತಿಗೆ ತರುತ್ತಿದೆ. ಅದರಲ್ಲಿ ಗೃಹಲಕ್ಷ್ಮೀ ಯೋಜನೆಯಡಿ ಮನೆಯ ಯಜಮಾನಿಗೆ 2 ಸಾವಿರ ಹಣ ನೀಡುವುದರ ಕುರಿತಾಗಿ ಮಹತ್ವದ ಮಾಹಿತಿಯೊಂದು ಸಿಕ್ಕಿದೆ. ಮನೆಯ ಯಜಮಾನಿಗೆ ಅರ್ಜಿಯೊಂದು ಬಿಡುಗಡೆಯಾಗಿದೆ. ಆ ಅರ್ಜಿಯಲ್ಲಿ ಏನೆಲ್ಲಾ ಇದೆ..? ಏನೆಲ್ಲಾ ತುಂಬಬೇಕು ಎಂಬ ಮಾಹಿತಿ ಇಲ್ಲಿದೆ.
ಜೂನ್ 15ರಿಂದ ಜುಲೈ15ರ ತನಕ ಅರ್ಜಿ ತುಂಬಲು ಕಾಲಾವಕಾಶ ನೀಡಲಾಗಿದೆ. ಈಗ ಇ – ಅರ್ಜಿ ನಮೂನೆಯನ್ನು ಬಿಡಿಗಡೆ ಮಾಡಿದೆ. ಸದ್ಯ ಈ ಅರ್ಜಿಯ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಾ ಇದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು . ಬಳಿಕ ಆಗಸ್ಟ್ 15 ರಂದು ಮನೆಯ ಯಜಮಾನಿಗೆ ಮೊದಲ ಕಂತಿನ ಹಣ ಸಂದಾಯವಾಗುತ್ತದೆ.
ಅರ್ಜಿಯಲ್ಲಿ ಮೊದಲಿಗೆ ಮನೆಯ ಯಜಮಾನಿಯ ಹೆಸರು ಮತ್ತು ವಿಳಾಸ ಭರ್ತಿಗೆ ನೀಡಲಾಗಿದೆ. ಆಧಾರ್ ಕಾರ್ಡ್, ವೋಟರ್ ಐಡಿ, ಪಡಿತರ ಸಂಖ್ಯೆ, ಉದ್ಯೋಗ, ಪತಿಯ ಹೆಸರು, ಪತಿಯ ಆಧಾರ್ ಕಾರ್ಡ್ ಕೂಡ ನಮೂದಿಸುವಂತೆ ಕೇಳಲಾಗಿದೆ. ಮೊಬೈಲ್ ನಂಬರ್ ನೀಡುವುದು ಕಡ್ಡಾಯ, ಬ್ಯಾಂಕ್ ಖಾತೆ ಸಂಖ್ಯೆ ಜೊತೆಗೆ ಪಾಸ್ ಬುಕ್ ಕೂಡ ನೀಡಬೇಕಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್