Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಕ್ತಿ ಯೋಜನೆಯ ಮೊದಲ ಬಸ್ ಹೊರಟಿದ್ದು ಎಲ್ಲಿಗೆ ಗೊತ್ತಾ..?

---Advertisement---

ಬೆಂಗಳೂರು, ಜೂ.11 : ಇಂದಿನಿಂದ ಕಾಂಗ್ರೆಸ್ ಸರ್ಕಾರದಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಚಾಲನೆ ಕೂಡ ಚಾಲನೆ ನೀಡಿದ್ದಾರೆ. ಚಾಲನೆ ಸಿಕ್ಕ ಮೊದಲ ದಿನ ಶ್ರೀ ಮಂಜುನಾಥ ಕ್ಷೇತ್ರಕ್ಕೆ ಬಸ್ ಕಳುಹಿಸಲಾಗಿದೆ. ಧರ್ಮಸ್ಥಳಕ್ಕೆ ಫ್ರೀ ಬಸ್ ಮಹಿಳೆಯರನ್ನು ಕರೆದೊಯ್ದಿದೆ.

ಫ್ರೀ ಬಸ್ ಯೋಜನೆಗೆ ಇಂದು ವಿಧಾನಸೌಧದಲ್ಲಿ ಚಾಲನೆ ನೀಡಲಾಗಿದೆ. ಆದರೆ ಧರ್ಮಸ್ಥಳಕ್ಕೆ ತೆರಳುವ ಬಸ್ ಗೆ ಸಿಎಂ ಸಿದ್ದರಾಮಯ್ಯ ಅವರು ಮೆಜೆಸ್ಟಿಕ್ ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಿದ್ದಾರೆ. ಎರಡನೇ ಬಸ್ ಮೈಸೂರಿಗೆ ಬಿಡಲಾಗಿದ್ದು, ಮೂರನೇ ಬಸ್ ಅನ್ನು ಕಲಬುರಗಿಗೆ ಬಿಡಲಾಗಿದೆ. ಇನ್ನು ನಾಲ್ಕನೆ ಬಸ್ ಅನ್ನು ಬೆಳಗಾವಿಗೆ ಬಿಡಲಾಗಿದೆ.

ಇಂದು ಮಧ್ಯಾಹ್ನದ ಬಳಿಕ ರಾಜ್ಯದ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ ಮಾಡಲಾಗಿದೆ. ಎಲ್ಲರಿಗೂ ಒಳ್ಳೆಯದ್ದಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹಾರೈಸಿದ್ದಾರೆ. 41.80 ಲಕ್ಷ ಮಹಿಳೆಯರು ಈ ಉಚಿತ ಸೇವೆಯ ಲಾಭ ಪಡೆಯಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...