Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿಯಾಗಿ ಕೆ.ಸಿ.ವೀರೇಂದ್ರ ಪಪ್ಪಿ ನೇಮಕ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ,(ಜೂ. 13) :  ಎಸ್.ಜೆ.ಎಂ. ವಿದ್ಯಾಪೀಠದ ನೂತನ ಕಾರ್ಯದರ್ಶಿಯಾಗಿ ಶಾಸಕರಾದ ಕೆ.ಸಿ. ವೀರೇಂದ್ರ (ಪಪ್ಪಿ) ಅಧಿಕಾರ ವಹಿಸಿಕೊಂಡಿದ್ದಾರೆ.

ನಂತರ ಮಾತನಾಡಿದ ಅವರು, ಇದೊಂದು ನನಗೆ ಬಯಸದೆ ಬಂದ ಭಾಗ್ಯ. ನನ್ನ ಮೇಲೆ ನಂಬಿಕೆಯಿಟ್ಟು ಈ ಹುದ್ದೆ ನೀಡಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ. ಶ್ರೀಮಠದ ಎಲ್ಲ ದಾಖಲೆಗಳನ್ನು ಈಗಿರುವ ಆಡಳಿತಾಧಿಕಾರಿಗಳು ಹಸ್ತಾಂತರಿಸಬೇಕು.

ಶ್ರೀಮಠದಲ್ಲಿ ಹಿಂದೆ ಕಾರ್ಯಕಲಾಪಗಳು ಹೇಗೆ ನಡೆಯುತ್ತಿದ್ದವೋ ಹಾಗೆಯೇ ಇನ್ನುಮುಂದೆ ನಡೆಯುತ್ತವೆ ಎಂದರು.

ಶ್ರೀ ಬಸವಪ್ರಭು ಸ್ವಾಮಿಗಳು ಮಾತನಾಡಿ, ಎಸ್.ಜೆ.ಎಂ ವಿದ್ಯಾಪೀಠದ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ ಅಭಿನಂದನೆಗಳು. ಈ ಮೊದಲು ಶ್ರೀಮಠದಲ್ಲಿ ಕಾರ್ಯಕಲಾಪಗಳು ಹೇಗೆ ನಡೆಯುತ್ತಿದ್ದವೋ ಹಾಗೆಯೇ ಸಮಿತಿಯ ಎಲ್ಲರೂ ಸೇರಿ ಮುಂದುವರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಎಚ್.ಆನಂದಪ್ಪ, ಡಿ.ಎಸ್. ಮಲ್ಲಿಕಾರ್ಜುನ್, ಶ್ರೀಮತಿ ದೇವಿಕುಮಾರಿ, ಶ್ರೀರಾಮ್, ಫಾತ್ಯರಾಜನ್, ನಾಗರಾಜ್, ಟಿ.ಎ.ಟಿ. ಸುರೇಶ್‍ಬಾಬು, ಎಂ.ಕೆ. ತಾಜ್‍ಪೀರ್, ವೀರೇಂದ್ರಕುಮಾರ್, ಜಯಕುಮಾರ್, ಎಸ್.ಪರಮೇಶ್, ಮಾರುತಿ, ಎಚ್.ಎಂ. ಮಂಜುನಾಥ, ಕಾರ್ತಿಕ್, ಪೊಲೀಸ್ ಮಲ್ಲಿಕಾರ್ಜುನ್, ಅನೀಸ್, ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯಕಾರಿ ಮಂಡಳಿ ಸದಸ್ಯರು ಹಾಜರಿದ್ದರು. ಪ್ರತಾಪ್ ಜೋಗಿ ಸ್ವಾಗತಿಸಿ, ವಂದಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೇ 15 ರಂದು ರಾಜವೀರ ಮದಕರಿನಾಯಕರ 242 ನೇ ಪುಣ್ಯಸ್ಮರಣೆ : ಬಿ.ಕಾಂತರಾಜ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 13  : ರಾಜವೀರ ಮದಕರಿನಾಯಕರ 242 ನೆ ಪುಣ್ಯಸ್ಮರಣೆ ಮೇ. 15 ರಂದು ಸರಳವಾಗಿ

ಆಂಬ್ಯುಲೆನ್ಸ್ ಬಂದಿದ್ದರೆ ನಟಿ ಪವಿತ್ರಾ ಬದುಕುತ್ತಿದ್ದರೇನೋ..?

    ಕನ್ನಡ ಹಾಗೂ ತೆಲುಗಿನ ಖ್ಯಾತ ನಟಿ ಪವಿತ್ರಾ ಜಯರಾಂ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ವಿಚಾರ ತೆಲುಗು ಇಂಡಸ್ಟ್ರಿಗೆ ದೊಡ್ಡ ಆಘಾತವನ್ನೇ ತಂದೊಡ್ಡಿದೆ. ತ್ತಿಯನಿ ಧಾರಾವಾಹಿಯಲ್ಲಿ ತಿಲೋತ್ತಮನಾಗಿ ಎಲ್ಲರ ಗಮನ ಸೆಳೆದಿದ್ದರು.

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

error: Content is protected !!