Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ತುರುವನೂರು ಹೋಬಳಿಯಲ್ಲಿ ಬಿತ್ತನೆ ಬೀಜ ಖರೀದಿಗೆ ರೈತರ ನಿರುತ್ಸಾಹ…!

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಶ್ರೀಧರ ಡಿ. ರಾಮಚಂದ್ರಪ್ಪ, ತುರುವನೂರು
ಮೊ :  7899789545

ಚಿತ್ರದುರ್ಗ, (ಜೂ.16) : ರಾಜ್ಯದಲ್ಲಿ ಕೆಲವೆಡೆ ಮಳೆಯಾಗುತ್ತಿದ್ದರೂ ಮುಂಗಾರು ಹಂಗಾಮು ನಿರೀಕ್ಷೆಯಂತೆ ಆಗಿಲ್ಲ. ಇನ್ನು ಚಿತ್ರದುರ್ಗ ಜಿಲ್ಲೆಯಲ್ಲೂ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಆಗದ ಕಾರಣ ರೈತರ ಉಳುಮೆ ಪ್ರಮಾಣ ಕೂಡ ಕುಂಠಿತಗೊಂಡಿದೆ.

ಗುಡುಗು ಸಿಡಿಲಿನ ಆರ್ಭಟದೊಂದಿಗೆ ಮುಂಗಾರು ಮಳೆ ಪ್ರವೇಶಿಸುವುದು ವಾಡಿಕೆ. ಆದರೆ ಈ ಬಾರಿ ಮಳೆ ಸುರಿಯದಿರುವುದು ರೈತರನ್ನು ಚಿಂತೆಗೆ ದೂಡಿದೆ. ತಾಲ್ಲೂಕಿನ ತುರುವನೂರು ಹೋಬಳಿಯಲ್ಲಿ ಮುಂಗಾರು ಹಂಗಾಮು ಕೈಕೊಟ್ಟಿದ್ದು, ಈ ಭಾಗದ ರೈತ ದಿನ ಬೆಳಗಾದರೆ ಮುಗಿಲಿನತ್ತ ನೋಡುವ ಹಾಗಿದೆ.

ಭೂಮಿ ಹದ : ಮಳೆ ಕೊರತೆಯ ನಡುವೆಯೂ ರೈತರು ಬಿತ್ತನೆಗೆ ಜಮೀನು ಹದಗೊಳಿಸುತ್ತಿದ್ದಾರೆ. ಆದರೆ ಬಿತ್ತನೆಗೆ ಬೇಕಾದ ಬೀಜ-ಗೊಬ್ಬರ ಖರೀದಿಸಲು ಈ ಭಾಗದ ರೈತ ನಿರುತ್ಸಾಹ ತೋರಿದ್ದಾನೆ. ಈ ಹೋಬಳಿಯಲ್ಲಿ ಬಿತ್ತನೆ ಕಾರ್ಯ ಶೇಕಡಾ 25 ರಷ್ಟು ಮಾತ್ರ ಆಗಿದೆ.

ಜೂನ್ ಮಧ್ಯ ಭಾಗ ಎರಡನೇ ವಾರಕ್ಕೆ ಕಾಲಿಟ್ಟಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರೈತರು ಬೀಜ – ಗೊಬ್ಬರ ಕೊಂಡುಕೊಳ್ಳುವುದರಲ್ಲಿ ಹಿಂದೇಟು ಹಾಕುತ್ತಿದ್ದಾರೆ.

ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ 2023-24 ನೇ ಸಾಲಿನ ಪ್ರಸಕ್ತ ವರ್ಷದಲ್ಲಿ ಬಿತ್ತನೆ ಬೀಜಗಳು ಸಮರ್ಪಕವಾಗಿ ಬಂದಿದ್ದು
ಈ ಭಾಗದ ಬಹುತೇಕ ರೈತರು ಬೆಳೆಯುವ ಶೇಂಗಾ ಸುಮಾರು 585 ಕ್ವಿಂಟಾಲ್ ಸರಬರಾಜಾಗಿದ್ದು, ಇದುವರೆಗೂ (ಜೂನ್ 15ಕ್ಕೆ)  ಕೇವಲ 100 ಕ್ವಿಂಟಾಲ್ ಮಾತ್ರ ರೈತರಿಂದ ಖರೀದಿಸಿದ್ದಾರೆ. ತೊಗರಿ ಬೀಜ 13 ಕ್ವಿಂಟಾಲ್ ದಾಸ್ತಾನು ಬಂದಿದ್ದು, ಖರೀದಿಯಾಗಿಲ್ಲ. ದ್ವಿದಳ ಧಾನ್ಯ ಸೋಯಾಬೀನ್ 30 ಕ್ವಿಂಟಾಲ್ ದಾಸ್ತಾನಿದ್ದು, ಖರೀದಿಯಾಗಿಲ್ಲ.

ಮತ್ತೊಂದು ವಾಣಿಜ್ಯ ಬೆಳೆ ಮೆಕ್ಕೆಜೋಳ ಸುಮಾರು 95 ಕ್ವಿಂಟಾಲ್ ಸರ್ಕಾರದಿಂದ ಬಂದಿದ್ದು,7 ಕ್ವಿಂಟಾಲ್ ಮಾತ್ರ ರೈತರಿಂದ ಖರೀದಿಯಾಗಿದೆ. ಸೂರ್ಯಕಾಂತಿ 26 ಕ್ವಿಂಟಾಲ್ ದಾಸ್ತಾನಿದ್ದು, ಖರೀದಿಯಾಗಿಲ್ಲ. ಮಳೆಯಾಗದ ಹಿನ್ನೆಲೆಯಲ್ಲಿ ರೈತರು ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ತುರುವನೂರು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ನಾಗರಾಜ್ ಅವರು ಪ್ರತಿಕ್ರಿಯಿಸಿದ್ದಾರೆ.

ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ದಾಸ್ತಾನಿರುವ ಬಿತ್ತನೆ ಬೀಜಗಳು ರೈತರಿಂದ ಖರೀದಿಯಾಗುವ ಆಶಾಭಾವನೆಯನ್ನು ಕೃಷಿ ಅಧಿಕಾರಿ ನಾಗರಾಜ್ ಸುದ್ದಿಒನ್ ಗೆ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೋಧನೆಗಿಂತ ಪ್ರಾಯೋಗಿಕ ಬೋಧನೆ ಹೆಚ್ಚು ಪರಿಣಾಮಕಾರಿ : ಎನ್.ಎಸ್.ಮಹೇಶ್

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 20 : ಬೋಧನೆಗಿಂತ ಪ್ರಾಯೋಗಿಕ ಬೋಧನೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಪಠ್ಯದ ವಸ್ತುಗಳು ಪಠ್ಯೇತರ ಚಟುವಟಿಕೆಗಳಿಂದ ಮಕ್ಕಳ ಮನಸ್ಸನ್ನು ಅರಳಿಸುತ್ತವೆ ಎಂದು ಮುಖ್ಯ ಶಿಕ್ಷಕ ಎನ್.ಎಸ್.ಮಹೇಶ್ ಅಭಿಪ್ರಾಯಪಟ್ಟರು. ನಗರದ ಕೆಳಗೋಟೆಯ ಸಿಕೆ

ಸುಳ್ಳು ಆರೋಪ ಮಾಡುವವರ ವಿರುದ್ಧ ಮಾನನಷ್ಟ ಮೊಕದ್ದಮೆ : ಬದರಿನಾಥ್

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ, ಸೆಪ್ಟೆಂಬರ್. 20 : ನನ್ನ ಮೇಲೆ ಆರೋಪ ಮಾಡುವವರ ವಿರುದ್ಧ ಮಾನನಷ್ಟ ಕೇಸ್ ದಾಖಲಿಸುವುದಾಗಿದೆ ಹಿಂದೂ ಮಹಾಗಣಪತಿ ಉತ್ಸವ

ಚಿತ್ರದುರ್ಗ | ಖಾಲಿ ನಿವೇಶನ ಸ್ವಚ್ಚಗೊಳಿಸಿ, ನಾಮಫಲಕ ಅಳವಡಿಸಿಕೊಳ್ಳಲು ಸೂಚನೆ

ಚಿತ್ರದುರ್ಗ. ಸೆ.20: ಚಿತ್ರದುರ್ಗ ನಗರದ ವ್ಯಾಪ್ತಿಯ ಸಾರ್ವಜನಿಕರು ತಮ್ಮ ನಿವೇಶನಗಳನ್ನು ಸ್ವಚ್ಛಗೊಳಿಸಿಕೊಂಡು ನಾಮಫಲಕ ಅಳವಡಿಸಿಕೊಳ್ಳಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ. ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿರುವ ಖಾಲಿ ನಿವೇಶಗಳನ್ನು ಸ್ವಚ್ಚಗೊಳಿಸಲು ಅನೇಕ ಕಾರ್ಯಕ್ರಮ

error: Content is protected !!